ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 20 ಡಿಸೆಂಬರ್ 2018 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ವೃತ್ತಿ ಮತ್ತು ಕೌಟುಂಬಿಕ ಕೆಲಸಗಳಲ್ಲಿ ಒತ್ತಡದಿಂದ ಓಡಾಡಬೇಕಾಗುತ್ತದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗುತ್ತದೆ. ಖರ್ಚುಗಳು ಮಿತಿಯಲ್ಲಿರಲಿ.

ವೃಷಭ:ಕೆಲಸಗಳಲ್ಲಿ ಯಶಸ್ಸು ಸಿಕ್ಕಿ ಆರ್ಥಿಕವಾಗಿ ಲಾಭ ಪಡೆಯುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರೆಯಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಸಾಂಸಾರಿಕವಾಗಿ ಸಂಗಾತಿಯೊಡನೆ ಹೊಂದಾಣಿಕೆಯ ಸಹಬಾಳ್ವೆ ನಡೆಸುವಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾದೀತು.

ಕರ್ಕಟಕ: ಆರೋಗ್ಯದ ಬಗ್ಗೆ ಕಾಳಜಿವಹಿಸಿರಿ. ಧನ ಲಾಭವಾಗುವುದು, ಆದರೆ ಅಷ್ಟೇ ಖರ್ಚು ವೆಚ್ಚಗಳೂ ತಲೆದೋರಲಿವೆ. ತಾಳ್ಮೆಯಿರಲಿ.

ಸಿಂಹ: ಇಂದು ನೀವು ಎಷ್ಟು ತಾಳ್ಮೆಯಿಂದಿರುತ್ತೀರೋ ಅಷ್ಟೇ ಒಳ್ಳೆಯದು. ಮುಂಗೋಪ ತೋರಿದರೆ ಕೆಲಸ ಕೆಡುತ್ತದೆ. ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಿದರೂ ತಾಳ್ಮೆ ಕೆಡಬೇಡಿ.

ಕನ್ಯಾ: ನಿಮ್ಮ ಮತ್ತು ಕುಟುಂಬದವರ ಆರೋಗ್ಯದ ಬಗ್ಗೆ ಎಚ್ಚರವಹಿಸಿ. ಹೆಚ್ಚಿನ ಓಡಾಟಗಳು, ಜವಾಬ್ಧಾರಿಗಳು ನಿಮ್ಮನ್ನು ಹೈರಾಣಾಗಿಸಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ:ಯಾವುದೇ ಕೆಲಸಕ್ಕೆ ಮೊದಲು ಕುಟುಂಬದವರ ಸಲಹೆ ಪಡೆದು ಮುನ್ನಡೆಯಿರಿ. ಏಕಾಂಗಿಯಾಗಿ ಕೈಗೊಳ್ಳುವ ನಿರ್ಧಾರಗಳು ನಿಮಗೇ ತಿರುಗುಬಾಣವಾಗುವ ಸಾಧ್ಯತೆಯಿದೆ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿಗಳು ಸುಧಾರಿಸಿ ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ನೆಲೆಸಲಿದೆ. ದೇವತಾ ಪ್ರಾರ್ಥನೆಯನ್ನು ಶ್ರದ್ಧೆಯಿಂದ ಮಾಡಿದರೆ ಮತ್ತಷ್ಟು ಶುಭಫಲ.

ಧನು: ಕಾರ್ಯದ ಒತ್ತಡಗಳಿಂದ ಇಂದು ವಿಶ್ರಾಂತಿ ಪಡೆಯುವಿರಿ. ವಿದ್ಯಾರ್ಥಿಗಳು ಪ್ರಯತ್ನ ಪಟ್ಟರೆ ಮಾತ್ರ ಯಶಸ್ಸು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಅನಿರೀಕ್ಷಿತ ಅತಿಥಿಗಳು, ಆರ್ಥಿಕ ಲಾಭ, ಅಚ್ಚರಿಯ ವಾರ್ತೆ ಇಂದು ನಿಮ್ಮನ್ನು ಖುಷಿಗೊಳಿಸಲಿದೆ. ಮಂಗಲ ಕಾರ್ಯಗಳನ್ನು ಕೈಗೊಳ್ಳುವಿರಿ.

ಕುಂಭ: ಸಂಸಾರದಲ್ಲಿ ಹೊಂದಾಣಿಕೆಯಿದ್ದು, ನೆಮ್ಮದಿಯ ವಾತಾವರಣ ಕಾಣುವಿರಿ. ಆದರೆ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮೀನ: ಅವಿವಾಹಿತರಿಗೆ ಕಂಕಣ ಬಲ ಕೂಡಿ ಬರಲಿದೆ. ದೇವರ ಕೆಲಸಗಳಲ್ಲಿ ತೊಡಗಿಸಿಕೊಂಡರೆ ಮತ್ತಷ್ಟು ಫಲ ಸಿಗುತ್ತದೆ. ಆರ್ಥಿಕವಾಗಿ ಖರ್ಚು, ವೆಚ್ಚಗಳ ಬಗ್ಗೆ ಎಚ್ಚರವಹಿಸಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments