Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 7 ಮಾರ್ಚ್ 2019 (09:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಮೇಲಧಿಕಾರಿಗಳಿಂದ ಅಧಿಕ ಕೆಲಸದೊತ್ತಡ ಇರುತ್ತದೆ. ಇದರಿಂದ ದೇಹಾಯಾಸವಾಗುವುದು. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಸುಧಾರಣೆ ಕಂಡುಬರಲಿದೆ. ಸಹೋದರರಿಂದ ಕಿರಿ ಕಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ.

ವೃಷಭ: ಕೌಟುಂಬಿಕವಾಗಿ ನಿಮ್ಮ ಇಷ್ಟಾರ್ಥಗಳು ಪೂರೈಕೆಯಾಗುತ್ತದೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ. ಆರ್ಥಿಕವಾಗಿ ಬಾಕಿ ಹಣ ಪಾವತಿಯಾಗಿ ಚೇತರಿಕೆ ಕಾಣುವಿರಿ.

ಮಿಥುನ: ಸಹೋದ್ಯೋಗಿಗಳಿಂದ ಕಿರಿ ಕಿರಿ ಇದ್ದರೂ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಹಿರಿಯರೊಂದಿಗೆ ವಾಗ್ವಾದ ನಡೆಸಬೇಡಿ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡುವಿರಿ.

ಕರ್ಕಟಕ: ಅಂದುಕೊಂಡ ಕಾರ್ಯಗಳಲ್ಲಿ ದೈವಬಲದಿಂದ ಜಯ ಸಿಗುವುದು. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರುವುದು. ಮನೆಯಲ್ಲಿ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ.

ಸಿಂಹ: ಕಾರ್ಯ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಬೇಡದ ವಿಚಾರಗಳು ಮನಸ್ಸಿಗೆ ಬಂದು ಖಿನ್ನತೆಗೊಳಗಾಗುವಿರಿ. ದಾಯಾದಿಗಳಿಂದ ಕಿರಿ ಕಿರಿ ಇರುತ್ತದೆ. ಸಂಸಾರದಲ್ಲಿ ಹೊಂದಾಣಿಕೆ ಅಗತ್ಯ.

ಕನ್ಯಾ: ಬಾಕಿ ಇದ್ದ ಸಾಲ ಪಾವತಿಯಾಗುವುದು. ಆರ್ಥಿಕವಾಗಿ ಚೇತರಿಕೆ ಕಾಣುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಆಸ್ತಿ ವಿಚಾರದಲ್ಲಿ ನೆರೆಹೊರೆಯವರೊಂದಿಗೆ ವಾಗ್ವಾದವಾಗುವುದು. ವಾಸ ಸ್ಥಳ ಬದಲಾವಣೆಗೆ ಚಿಂತನೆ ಮಾಡುವಿರಿ.

ತುಲಾ: ಹೊಸ ವ್ಯಾಪಾರ, ವ್ಯವಹಾರಕ್ಕೆ ಕೈ ಹಾಕಿದರೆ ಲಾಭ ಕಾಣುವಿರಿ. ಆದರೆ ಕೌಟುಂಬಿಕವಾಗಿ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಮಾಡುವಿರಿ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ.

ವೃಶ್ಚಿಕ: ನಿರುದ್ಯೋಗಿಗಳು ಬಂದ ಅವಕಾಶವನ್ನು ಉಪಯೋಗಿಸಬೇಕು. ವಿದ್ಯಾರ್ಥಿಗಳಿಗೆ ವಿದೇಶ ಯಾನದ ಯೋಗವಿದೆ. ಅಡಚಣೆಗಳಿದ್ದರೂ ನಿಮ್ಮ ಕೆಲಸಗಳಲ್ಲಿ ಜಯ ಕಾಣುವಿರಿ. ತಾಳ್ಮೆಯಿಂದ ನಿಭಾಯಿಸಿದರೆ ಎಲ್ಲವೂ ಶುಭ.

ಧನು: ಉದ್ಯೋಗ ಕ್ಷೇತ್ರದಲ್ಲಿ ನೆಮ್ಮದಿ ಇರುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ನಿರುದ್ಯೋಗಿಗಳು ಒಳ್ಳೆಯ ಅವಕಾಶಕ್ಕಾಗಿ ಸ್ವಲ್ಪ ದಿನ ಕಾಯಬೇಕು. ಬಹುದಿನಗಳಿಂದ ಬಾಕಿಯಿದ್ದ ದೇವತಾ ಕಾರ್ಯಗಳನ್ನು ನೆರವೇರಿಸುವಿರಿ.

ಮಕರ: ನೀವು ಅಂದುಕೊಂಡ ಕಾರ್ಯಗಳು ನೆರವೇರುವುದು. ದೇವರ ಬಲ ನಿಮ್ಮ ಮೇಲಿದ್ದು, ಕೌಟುಂಬಿಕವಾಗಿ ನೆಮ್ಮದಿ ಕಾಣುವಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಸಂತಸವಾಗುವುದು. ಹೊಸ ವಸ್ತು, ಆಸ್ತಿ ಖರೀದಿ ಬಗ್ಗೆ ಚಿಂತನೆ ಮಾಡುವಿರಿ.

ಕುಂಭ: ಹಣ ಸಂಪಾದನೆಗೆ ನಾನಾ ಮಾರ್ಗ ಕಾಣುವಿರಿ. ಆದರೆ ಹೊಸ ಬಂಡವಾಳ ಹೂಡುವಾಗ ಹಿತ ಶತ್ರುಗಳ ಬಣ್ಣದ ಮಾತಿಗೆ ಮರುಳಾಗಬೇಡಿ. ವಿವೇಚನೆಯಿಂದ ಹೆಜ್ಜೆಯಿಡಿ. ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ.

ಮೀನ: ಆರ್ಥಿಕ ಪರಿಸ್ಥಿತಿ ಹದಗೆಡುವುದು. ವಿದ್ಯಾರ್ಥಿಗಳಿಗೆ ಪರೀಕ್ಷೆಗಾಗಿ ತಯಾರಿ ನಡೆಸಲು ಒಂದು ರೀತಿಯ ಉದಾಸೀನ ಪ್ರವೃತ್ತಿ ಕಂಡುಬರುವುದು. ಪೂರ್ವ ದಿಕ್ಕಿನ ಪ್ರಯಾಣ ಶುಭವನ್ನುಂಟು,ಮಾಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ                         

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments