ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 4 ಏಪ್ರಿಲ್ 2019 (09:04 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ:  ಸ್ಥಿರ ಉದ್ಯೋಗ ಲಭಿಸುವುದಾದರೂ ಕಿರಿ ಕಿರಿ ತಪ್ಪದು. ವಿಪರೀತ ಓಡಾಟ, ಕಾರ್ಯದೊತ್ತಡದಿಂದ ಹೈರಾಣಾಗುವಿರಿ. ಸಂಗಾತಿಯೊಂದಿಗೆ ಹಿಂದೆ ಮಾಡಿದ ಮನಸ್ತಾಪ ಮುಂದುವರಿಯುವುದು. ತಾಳ್ಮೆಯಿಂದಿರಿ.

ವೃಷಭ: ಗುರು ಲಾಭದಾಯಕನಾಗಿದ್ದು, ಉದ್ಯೋಗ, ಆರ್ಥಿಕ ಸ್ಥಿತಿ ಗತಿಗಳು ಸುಧಾರಿಸುವುದು. ಹೊಸ ವ್ಯವಹಾರಗಳಿಗೆ ಕೈ ಹಾಕುವಿರಿ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಉತ್ತಮ ಸ್ಥಾನ ಮಾನ ಪಡೆಯುವಿರಿ.

ಮಿಥುನ: ಕುಟುಂಬದಲ್ಲಿ ಕೆಲವೊಂದು ಸಮಸ್ಯೆಗಳಿಗೆ ನೀವೇ ಜವಾಬ್ಧಾರಿ ವಹಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ಸಂಗಾತಿಯ ಸಹಕಾರ ಲಭಿಸುವುದು. ತಾಳ್ಮೆಯಿಂದ ಮುನ್ನಡೆದರೆ ಮಾತ್ರ ಯಶಸ್ಸು ದೊರಕುವುದು.

ಕರ್ಕಟಕ: ವ್ಯಾಪಾರ, ವಹಿವಾಟಿನಲ್ಲಿ ತೊಡಗಿಸಿಕೊಂಡವರು ಉತ್ತಮ ಲಾಭ ಪಡೆಯುವರು. ವೈವಾಹಿಕ ಜೀವನದಲ್ಲಿ ಏರು ಪೇರು ಕಂಡುಬಂದೀತು. ಹಿರಿಯರ ಮಧ್ಯಸ್ಥಿಕೆ ಬೇಗಾಬಹುದು. ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗುವುದು.

ಸಿಂಹ: ಕುಟುಂಬದಲ್ಲಿ ಶುಭ ಕಾರ್ಯಗಳನ್ನು ನೆರವೇರಿಸಲು ನೀವೇ ಓಡಾಟ ನಡೆಸಬೇಕಾಗುತ್ತದೆ. ಸಹೋದರಿಯಿದ್ದರೆ ವಿವಾಹ ಸಂಬಂಧೀ ಪ್ರಸ್ತಾಪಗಳು ಬರುವುದು. ಸಹನೆಯಿಂದ ಕೆಲಸ ನಿಭಾಯಿಸಿ. ಆರ್ಥಿಕವಾಗಿ ಖರ್ಚು ವೆಚ್ಚಗಳಾಗಬಹುದು.

ಕನ್ಯಾ: ಕಾರ್ಯಾರಂಭದಲ್ಲಿ ವಿಘ್ನಗಳಿದ್ದರೂ ಕಾರ್ಯಸಾಧನೆಗೆ ತೊಂದರೆಯಾಗದು. ಮಾನಸಿಕವಾಗಿ ಯಾವುದೋ ಬೇಸರ ಕಾಡಲಿದೆ. ಇದರಿಂದ ಕೆಲಸದಲ್ಲೂ ನಿರಾಸಕ್ತಿ ಮೂಡಬಹುದು. ವೃತ್ತಿರಂಗದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ತುಲಾ: ದೂರ ಸಂಚಾರದಿಂದ ಆರೋಗ್ಯ ಹದಗೆಡಬಹುದು. ಅಪರಿಚಿತರೊಂದಿಗೆ ವ್ಯವಹರಿಸಲು ಹೋಗಬೇಡಿ. ದುಡುಕಿನ ವರ್ತನೆ ತೋರದಿರಿ. ತಾಳ್ಮೆ, ಸಮಾಧಾನದಿಂದ ಮುಂದುವರಿದರೆ ಎಲ್ಲಾ ಕ್ಷೇತ್ರದಲ್ಲೂ ಜಯ ಸಿಗುವುದು.

ವೃಶ್ಚಿಕ: ಕುಟುಂಬ ಸದಸ್ಯರಲ್ಲಿ ಯಾರಾದರೂ ಒಬ್ಬರಿಗೆ ಆರೋಗ್ಯ ಸಮಸ್ಯೆ ಕಾಡಿ ಆಸ್ಪತ್ರೆಗೆ ಅಲೆದಾಡಬೇಕಾಗಬಹುದು. ಉದ್ಯೋಗಿಗಳಿಗೆ ಮುನ್ನಡೆ, ಬಡ್ತಿ ಯೋಗವಿದೆ. ಮಕ್ಕಳ ವಿದ್ಯಾಭ್ಯಾಸದ ವಿಚಾರಕ್ಕೆ ಚಿಂತೆಯಾಗುವುದು.

ಧನು: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುತ್ತದೆ. ಪ್ರಯಾಣ ಮಾಡಬೇಕಾಗಿಬರುವುದು. ಮನೆಯಲ್ಲಿ ಕಳ್ಳತನದ ಭೀತಿಯಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವಿರಿ. ಎಚ್ಚರಿಕೆಯಿಂದಿರಿ.

ಮಕರ: ಯಾವುದಾದರೂ ಹೊಸ ಕೆಲಸಕ್ಕೆ ಕೈ ಹಾಕಬೇಕೆಂದುಕೊಂಡಿದ್ದರೂ ಹಣದ ಸಮಸ್ಯೆಯಿಂದ ಸಾಧ್ಯವಾಗದು. ಸಂಗಾತಿಯೊಂದಿಗೆ ತಾಳ್ಮೆಯಿಂದ ವರ್ತಿಸದೇ ಹೋದಲ್ಲಿ ಮನಸ್ತಾಪ ಗ್ಯಾರಂಟಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭಿಸುವುದು.

ಕುಂಭ: ಪತಿ-ಪತ್ನಿಯರಲ್ಲಿ ಮಕ್ಕಳ ವಿಚಾರಕ್ಕೆ ಭಿನ್ನಾಭಿಪ್ರಾಯಗಳು ಮೂಡುವುದು. ಆರ್ಥಿಕವಾಗಿ ಹಲವು ಖರ್ಚು ವೆಚ್ಚಗಳು ಎದುರಾಗಲಿವೆ. ಹಿರಿಯರ ಸಲಹೆಗಳಿಗೆ ಬೆಲೆ ಕೊಡಿ. ಏಕಾಂಗಿ ನಿರ್ಧಾರಗಳು ಕೈಕೊಡುವ ಸಾಧ್ಯತೆಯಿದೆ.

ಮೀನ: ಕುಟುಂಬಕ್ಕೆ ಸಂಬಂಧಿಸಿದ ಕೆಲಸಗಳಿಗೆ ಹೆಚ್ಚಿನ ಓಡಾಟ ನಡೆಸಬೇಕಾಗುತ್ತದೆ. ಆರ್ಥಿಕ ಸಂಕಷ್ಟಗಳು ನಿಧಾನವಾಗಿ ದೂರವಾಗಿ ಅಭಿವೃದ್ಧಿ ಕಾಣುವಿರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಜ್ಯೋತಿಷ್ಯ ಪ್ರಕಾರ ಕುಂಭ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಶಿವ ಷಡಕ್ಷರೀ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಜ್ಯೋತಿಷ್ಯ ಪ್ರಕಾರ ಮಕರ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಮುಂದಿನ ಸುದ್ದಿ
Show comments