ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 29 ಮೇ 2019 (05:24 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ. ಕೆಲಸದೊತ್ತಡ ಹೆಚ್ಚಲಿದೆ.

ವೃಷಭ: ಕಚೇರಿಯಲ್ಲಿ ಮೇಲಧಿಕಾರಿಗಳಿಂದ ತೊಂದರೆ ತಪ್ಪಿದ್ದಲ್ಲ. ಕಾರ್ಯಸಾಧನೆಗೆ ಅಡ್ಡಿಯಾದರೂ ತಾಳ್ಮೆಯಿಂದಿರಬೇಕು. ಕೌಟುಂಬಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಬಂಧುಗಳ ಆಗಮನ ಖುಷಿ ನೀಡಲಿದೆ.

ಮಿಥುನ: ಕಾರ್ಯಸಾಧನೆಗೆ ಹಿತ ಶತ್ರುಗಳ ಅಡ್ಡಿ ಆತಂಕ ಇದ್ದೇ ಇರುತ್ತದೆ. ಆಂಜನೇಯ ಸ್ವಾಮಿ ಪ್ರಾರ್ಥನೆಯಿಂದ ಆತ್ಮಸ್ಥೈರ್ಯ ಹೆಚ್ಚುವುದು. ಆದರೆ ನೀವು ಕಲಿತ ವಿದ್ಯೆಯನ್ನು ಯಾರೂ ಕಸಿಯಲು ಸಾಧ್ಯವಿಲ್ಲ. ಅಂತಿಮವಾಗಿ ಜಯ ನಿಮ್ಮದೇ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಸಹಕಾರ ಸಿಗಲಿದೆ. ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ದೂರ ಸಂಚಾರ ಮಾಡುವರು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳು ಸೂಕ್ತ ಉದ್ಯೋಗಕ್ಕೆ ಕೆಲವು ಕಾಲ ಕಾಯಬೇಕಾಗುತ್ತದೆ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು ಖರ್ಚು ವೆಚ್ಚಗಳು ಹೆಚ್ಚಲಿವೆ.

 
ಕನ್ಯಾ: ದುಶ್ಚಟಗಳಿಂದ ದೂರವಿರಿ. ದುರ್ಜನರ ಮಾತಿಗೆ ಕಿವಿಗೊಟ್ಟು ಕೆಲಸ ಹಾಳು ಮಾಡಿಕೊಳ್ಳಬೇಡಿ. ಮಕ್ಕಳ ಅಭ್ಯಾಸ ವಿಷಯದಲ್ಲಿ ಚಿಂತೆಯಾಗಬಹುದು. ಅನಿರೀಕ್ಷಿತವಾಗಿ ಖರ್ಚುಗಳು ತೋರಿಬಂದೀತು.

ತುಲಾ: ವ್ಯಾಪಾರ ವ್ಯವಹಾರದಲ್ಲಿ ನಿವ್ವಳ ಲಾಭ ಗಳಿಸಬಹುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಮುಂದಾಗುವಿರಿ. ಅವಿವಾಹಿತರಿಗೆ ಮನಸ್ಸಿಗೆ ಒಪ್ಪಿಗೆಯಾಗುವ ಸಂಬಂಧಗಳು ಕೂಡಿಬರಲಿವೆ.

ವೃಶ್ಚಿಕ: ನಿರುದ್ಯೋಗಿಗಳಿಗೆ ಹತಾಶೆಯ ಮನೋಭಾವ ಕಾಡಬಹುದು. ಸ್ವ ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಕೋರ್ಟು ವ್ಯವಹಾರದಲ್ಲಿ ಜಯ.

ಧನು: ವೃತ್ತಿರಂಗದಲ್ಲಿ ಯಶಸ್ಸು ನಿಮ್ಮ ಕೈಹಿಡಿಯಲಿದೆ. ಹಂತ ಹಂತವಾಗಿ ಅಭಿವೃದ್ಧಿ ತೋರಿಬರಲಿದೆ. ಪ್ರಯತ್ನ ಬಲವಿದ್ದರೆ ವಿದ್ಯಾರ್ಥಿಗಳಿಗೆ ಯಶಸ್ಸು ಸಾಧ್ಯ. ಆಸ್ತಿ ಖರೀದಿಗೆ ಮುಂದಾಗುವಿರಿ.

ಮಕರ: ವೃತ್ತಿ ರಂಗದಲ್ಲಿ ಏನೋ ಒಂದು ರೀತಿಯ ಅಸಮಾಧಾನವಿರಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ. ನೂತನ ವಧೂ ವರರಿಗೆ ಪ್ರವಾಸ ಭಾಗ್ಯ. ಕೌಟುಂಬಿಕವಾಗಿ ಮಕ್ಕಳಿಂದ ಸಂತಸದ ವಾರ್ತೆ.

ಕುಂಭ: ಸಂಗಾತಿಯ ಕಿರಿ ಕಿರಿಗೆ ಮನಸ್ಸಿಗೆ ಬೇಸರವಾಗಬಹುದು. ಕಾರ್ಯನಿಮಿತ್ತ ಓಡಾಟ ತಪ್ಪದು. ಆದಾಯ, ಖರ್ಚು ವೆಚ್ಚಗಳ ಬಗ್ಗೆ ಲೆಕ್ಕವಿಟ್ಟುಕೊಳ್ಳದೇ ಇದ್ದರೆ ಮುಂದೆ ತೊಂದರೆಯಾದೀತು. ದೇವತಾ ಪ್ರಾರ್ಥನೆ ಮಾಡಿ.

ಮೀನ: ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಸಹೋದರರೊಂದಿಗೆ ಆಸ್ತಿ ವಿಚಾರಕ್ಕೆ ಕಲಹವಾಗದಂತೆ ಹಿರಿಯರ ಸಲಹೆ ಪಡೆಯುವುದು ಉತ್ತಮ. ಸಂಗಾತಿಯ ಅಲಂಕಾರಿಕ ವಸ್ತುಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments