ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 29 ಜೂನ್ 2019 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನೀವು ಮನಸ್ಸಿನಲ್ಲಿ ಅಂದುಕೊಂಡ ಕೆಲಸ ನೆರವೇರಲಿದೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ದೊರಕಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ವೃಷಭ: ಗೃಹ ನಿರ್ಮಾಣ ಕಾರ್ಯಗಳಿಗೆ ಕೈ ಹಾಕಲು ಇದು ಸಕಾಲ. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡದಿರಿ. ವಾಗ್ವಾದಗಳನ್ನು ಪರಿಹರಿಸಲು ವಿಶಾಲ ಮನೋಭಾವ ಬೇಕು. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ವಾಗ್ವಾದಗಳು ಎದುರಾಗುವುದು. ಇದರಿಂದ ಮಾನಸಿಕ ನೆಮ್ಮದಿಗೆ ಭಂಗ. ಸಾಲ ಮಾಡಲು ಹೋಗಬೇಡಿ. ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ.

ಕರ್ಕಟಕ: ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರುವುದು. ಉದ್ಯೋಗದಲ್ಲಿ ಬಡ್ತಿ, ವೇತನ ಹೆಚ್ಚಳ ಸಂಭವವಿದೆ. ಮನೆ ಬದಲಾವಣೆಗೆ ಚಿಂತನೆ ನಡೆಸುವಿರಿ. ಸರಕಾರಿ ಕಚೇರಿಗೆ ಓಡಾಟ ನಡೆಸಬೇಕಾಗುತ್ತದೆ.

ಸಿಂಹ: ಹಿರಿಯರೊಂದಿಗೆ ಆದಷ್ಟು ವಾದ ವಿವಾದಗಳಾಗದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳು ನಿಮ್ಮ ಏಳಿಗೆ ಕಂಡು ಅಸೂಯೆಪಡುವರು. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ.

 
ಕನ್ಯಾ: ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಿ ಬರುತ್ತದೆ. ವೃತ್ತಿರಂಗದಲ್ಲಿ ಕಾರ್ಯದೊತ್ತಡದಿಂದ ದೇಹ ಹೈರಾಣಾಗಲಿದೆ. ವ್ಯಾಪಾರ, ವ್ಯವಹಾರ ಮಾಡುವರಿಗೆ ಮುನ್ನಡೆಯಾಗಲಿದೆ.

ತುಲಾ: ಉದ್ಯೋಗ ಅರಸಿಕೊಂಡು ದೂರ ಸಂಚಾರ ಮಾಡುವಿರಿ. ದೈಹಿಕ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಏರ್ಪಾಟು ಮಾಡುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಶ್ಚಿಕ: ತಾಳ್ಮೆ ಸಮಾಧಾನದಿಂದ ಮುನ್ನಡೆದರೆ ಇಂದು ನೀವು ಕೈ ಹಿಡಿದ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಸಾಲಗಳು ಮರುಪಾವತಿಯಾಗಲಿವೆ. ದೇವತಾ ಪ್ರಾರ್ಥನೆ ಮಾಡಿ.

ಧನು: ಕಠಿಣ ಪರಿಶ್ರಮ ಪಟ್ಟರೆ ತಕ್ಕ ಫಲ ಸಿಗುವುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ತಲೆದೋರಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಆಲಸ್ಯ ಕಂಡುಬಂದೀತು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಮಕರ: ದೈವಾನುಕೂಲದಿಂದ ಇಂದು ನೀವು ಕೈ ಹಿಡಿದ ಕೆಲಸಗಳು ಯಶಸ್ವಿಯಾಗಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಾಣುವಿರಿ. ಉದ್ಯೋಗಿಗಳಿಗೆ ಬಡ್ತಿ ಯೋಗವಿದೆ. ಸಂಗಾತಿಯೊಂದಿಗೆ ಸುಮಧುರ ಕ್ಷಣ ಕಳೆಯುವಿರಿ.

ಕುಂಭ: ಸಂಗಾತಿಯೊಂದಿಗೆ ಅಸಮಾಧಾನವಾಗಲಿದೆ. ದುಡುಕಿನ ಮಾತಿನಿಂದ ಕೆಲಸ ಕೆಟ್ಟೀತು. ಅನಗತ್ಯ ವಾದ ವಿವಾದಗಳಿಂದ ದೂರವಿರುವುದೇ ಒಳ್ಳೆಯದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ವಿಘ್ನಗಳು ತೋರಿಬಂದರೂ ನಿಮ್ಮ ಯಶಸ್ಸನ್ನು ಯಾರೂ ತಡೆಹಿಡಿಯಲಾಗದು. ಮಹಿಳೆಯರಿಂದ ಸಹಕಾರ ದೊರೆಯಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ. ಅನಗತ್ಯ ಖರ್ಚು  ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments