ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 23 ಆಗಸ್ಟ್ 2019 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರೋಗ್ಯದಲ್ಲಿ ಸುಧಾರಣೆ ಕಂಡುಬಾರದೇ ಚಿಂತೆಯಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸ ಮಾಡಬೇಕಾಗುತ್ತದೆ. ಹಾಗಿದ್ದರೂ ನಿಮ್ಮ ಕೆಲಸಕ್ಕೆ ತಕ್ಕ ಪ್ರತಿಫಲ ದೊರಕುವುದು. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ.

ವೃಷಭ: ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಕೊಂಚ ಹಿನ್ನಡೆಯಾಗಬಹುದು. ಸ್ವ ಉದ್ಯೋಗಿಗಳಿಗೆ ನಿವ್ವಳ ಲಾಭ ಸಿಗಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು.

ಮಿಥುನ: ಸಂಗಾತಿಯ ಮನೋಕಾಮನೆಗಳನ್ನು ಪೂರೈಸುವಿರಿ. ಆದಾಯಕ್ಕಿಂತ ಹೆಚ್ಚು ಖರ್ಚಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಕರ್ಕಟಕ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಸಕ್ತಿ ಕಡಿಮೆಯಾಗಬಹುದು. ಹಿರಿಯರ ಆರೋಗ್ಯ ಹದಗೆಟ್ಟು ಆಸ್ಪತ್ರೆಗೆ ಅಲೆದಾಡಬೇಕಾಗಬಹುದು. ಆರ್ಥಿಕವಾಗಿ ಚೇತರಿಕೆ ಕಂಡುಬಂದು ಅಂದುಕೊಂಡ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡುವಿರಿ.

ಸಿಂಹ: ರಾಜಕೀಯ ರಂಗದವರಿಗೆ ಸ್ಥಾನ ಮಾನ ಹೆಚ್ಚುವುದು. ಆದರೆ ಮಹಿಳೆಯರಿಂದ ಅಪವಾದದ ಭೀತಿಯಿದೆ. ಎಚ್ಚರಿಕೆಯಿಂದ ವ್ಯವಹರಿಸಿ. ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಕನ್ಯಾ: ಸಂಗಾತಿಯ ಜತೆಗೆ ಕೌಟುಂಬಿಕ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ವಿರಸ ಮೂಡಬಹುದು. ದುಡುಕಿನ ಮಾತನಾಡಲು ಹೋಗಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹ ಹೈರಾಣಾಗುವುದು. ಮನೆ ಬದಲಾವಣೆಗೆ ಚಿಂತನೆ ಮಾಡುವಿರಿ.

ತುಲಾ: ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಧಾರ್ಮಿಕ ಕಾರ್ಯಗಳಿಗಾಗಿ ಓಡಾಟ ನಡೆಸುವಿರಿ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಅರ್ಧಕ್ಕೆ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ. ಕೃಷಿ ಕ್ಷೇತ್ರದಲ್ಲಿರುವವರಿಗೆ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಇಷ್ಟಮಿತ್ರರೊಂದಿಗೆ ಭೋಜನ, ಪ್ರವಾಸ ಸಾಧ್ಯತೆಯಿದೆ. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ಹಿರಿಯರ ಸಲಹೆಗಳು ಪಥ್ಯವಾಗದು. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಪ್ರಶಂಸೆಗೊಳಗಾಗುವರು. ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಧನು: ಸಹೋದರರೊಂದಿಗೆ ಆಸ್ತಿ ವಿಚಾರದಲ್ಲಿ ಕಿರಿ ಕಿರಿಯಾಗಬಹುದು. ಆದರೆ ಮಾತಿನ ಮೇಲೆ ನಿಗಾ ಇರಲಿ. ಸಂಗಾತಿಯ ಮಾತಿಗೆ ಕಿವಿಗೊಡಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗುವುದು. ಸಣ್ಣ ವ್ಯಾಪಾರಿಗಳಿಗೆ ಮುನ್ನಡೆಯಿರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ಮಕರ: ಹೊಸ ಜನರ ಭೇಟಿಯಿಂದ ಮನಸ್ಸಿಗೆ ಖುಷಿಯಾಗುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸುವಿರಿ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ತಾಳ್ಮೆ ಅಗತ್ಯ.

ಕುಂಭ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಂದ ಅಂದುಕೊಂಡ ಕಾರ್ಯಗಳನ್ನು ಪೂರ್ತಿ ಮಾಡಲಾಗದು. ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯಿಂದ ಕಿರಿ ಕಿರಿ ತಪ್ಪದು. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆಯಾಗುವುದು. ತಾಳ್ಮೆಯಿಂದಿರಿ.

ಮೀನ: ಉದರ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ಮಹಿಳಾ ಉದ್ಯೋಗಿಗಳಿಗೆ ಮುನ್ನಡೆಯಿರುತ್ತದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಚಿಂತನೆ ಮಾಡುವರು. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಾಗುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments