ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 24 ಫೆಬ್ರವರಿ 2020 (09:19 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯವಹಾರದಲ್ಲಿ ಉನ್ನತಿಯ ಯೋಗವಿದೆ. ಕಷ್ಟಪಟ್ಟಿದ್ದಕ್ಕೆ ತಕ್ಕ ಫಲ ಸಿಗುವುದು. ಆದರೆ ಖಾಸಗಿ ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಎದುರಾಗುವ ಸಮಸ್ಯೆಗಳನ್ನು ನಿವಾರಿಸುವಿರಿ. ಸಾಂಸಾರಿಕವಾಗಿ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳಿಗೆ ಅಂತ್ಯ ಹಾಡುವಿರಿ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಬೇಕು.

ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ನಯವಂಚಕರ ಕಾಟವಿರಲಿದ್ದು, ಅಡೆತಡೆಗಳುಂಟಾಗಲಿದೆ. ಸಂಗಾತಿಯ ಸಲಹೆಗಳು ಪ್ರಯೋಜನಕ್ಕೆ ಬರುವುದು. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಕಾರ್ಯನಿಮಿತ್ತ ಕಿರು ಸಂಚಾರ ಯೋಗವಿರುತ್ತದೆ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತವಾಗಿ ಸ್ಥಾನ ಪಲ್ಲಟವಾಗಲಿದೆ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ವ್ಯಾಪಾರ ವ್ಯವಹಾರದಲ್ಲಿ ಹೂಡಿಕೆ ಮಾಡಲು ಇದು ಸಕಾಲ. ವಾಹನ ಖರೀದಿಗೆ ಮುಂದಾಗುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ವಿವಾಹ ಪ್ರಯತ್ನಗಳಿಗೆ ಇದುವರೆಗೆ ಇದ್ದ ಅಡೆತಡೆಗಳು ದೂರವಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ದಾಯಾದಿಗಳೊಂದಿಗಿನ ಮನಸ್ತಾಪಗಳು ದೂರವಾಗಲಿದೆ. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಬಹುದು, ಎಚ್ಚರ.

ತುಲಾ: ಇದುವರೆಗೆ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ಶತ್ರು ಪೀಡೆ ದೂರವಾಗಲಿದೆ. ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾದೀತು. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ದೂರ ಸಂಚಾರ ಸಾಧ್ಯತೆಯಿದೆ.

ವೃಶ್ಚಿಕ: ಇಷ್ಟ ಮಿತ್ರರ ಭೇಟಿ, ಭೋಜನ ಸಾಧ‍್ಯತೆಯಿದೆ. ಮನಸ್ಸಿನಲ್ಲಿ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಆರೋಗ್ಯದಲ್ಲಿ ಸುದಾರಣೆಯಾಗಲಿದೆ.

ಧನು: ಮಾನಸಿಕವಾಗಿ ಹಲವು ಚಿಂತೆಗಳು ಕಾಡಲಿದ್ದು, ಗೊಂದಲದ ವಾತಾವರಣವಿರಲಿದೆ. ಸಂಗಾತಿಯಿಂದ ಸಾಂತ್ವನ ಸಿಗಲಿದೆ. ಅನಗತ್ಯವಾಗಿ ಬೇರೆಯವರ ವಿಚಾರಕ್ಕೆ ತಲೆಕೆಡಿಸಿಕೊಳ್ಳಬೇಡಿ. ಅಧಿಕ ಧನಲಾಭ ತರುವ ಯೋಜನೆಗಳಿಗೆ ಕೈ ಹಾಕಲಿದ್ದೀರಿ.

ಮಕರ: ಕೌಟುಂಬಿಕ ಜವಾಬ್ಧಾರಿಗಳು ಹೆಚ್ಚಲಿದ್ದು, ಅಧಿಕ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಹಿರಿಯರಿಂದ ಗುರುತರ ಜವಾಬ್ಧಾರಿ ಸಿಗಲಿದೆ. ತಾಳ್ಮೆಯಿಂದ ನಿಭಾಯಿಸಿ.

ಕುಂಭ: ಮಹಿಳೆಯರಿಗೆ ಋಣಾತ್ಮಕ ಚಿಂತೆಗಳು ಕಾಡಲಿದ್ದು, ಮನಶ್ಶಾಂತಿಗಾಗಿ ದೇವರ ಮೊರೆ ಹೋಗುವುದು ಉತ್ತಮ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ.

ಮೀನ: ಕೆಳ ಹಂತದ ನೌಕರರಿಗೆ ಉನ್ನತಿಯ ಯೋಗವಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ಹಣಕಾಸಿನ ಹರಿವಿಗೆ ತೊಂದರೆಯಾದೀತು. ಗೃಹ ಸಂಬಂಧೀ ಕೆಲಸಗಳನ್ನು ಕೆಲ ಸಮಯ ಮುಂದೂಡಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂಗಳ ದೋಷವಿದ್ದಾಗ ಏನೆಲ್ಲಾ ಆಗುತ್ತದೆ ನೋಡಿಕೊಳ್ಳಿ

ಸುಬ್ರಹ್ಮಣ್ಯನ ಕುರಿತಾದ ಈ ಮಂತ್ರವನ್ನು ತಪ್ಪದೇ ಓದಿ

ಲಕ್ಷ್ಮೀ ದೇವಿಯ ಅನುಗ್ರಹ ಸಿಗಬೇಕಾದರೆ ಶುಕ್ರವಾರ ಮಾಡಲೇಬೇಕಾದ ಕೆಲಸಗಳು

ದೇವಿಯ ಅನುಗ್ರಹಕ್ಕಾಗಿ ಇಲ್ಲಿದೆ ಸರಳ, ಚುಟುಕಾದ ದೇವಿ ಮಂತ್ರ

ವೆಂಕಟೇಶ್ವರ ಮಂಗಳಾಷ್ಟಕಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments