ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 17 ಆಗಸ್ಟ್ 2020 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರಾಗಲಿದ್ದು, ಅಧಿಕ ಖರ್ಚು ವೆಚ್ಚಗಳಾಗಲಿವೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಬೇಕಾಗುತ್ತದೆ. ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ವೃಷಭ: ಸರಕಾರಿ ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹ ಹೈರಾಣಾಗಬಹುದು. ಕೃಷಿಕರಿಗೆ ತಮ್ಮ ಚಟುವಟಿಕೆಗಳಿಗೆ ಅಡ್ಡಿ ಎದುರಾಗಲಿದೆ. ಸಾಮಾಜಿಕ ಕಾರ್ಯದಿಂದ ಮನಸ್ಸಿಗೆ ನೆಮ್ಮದಿಯಾಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮನಸ್ಸಿಗೆ ನೆಮ್ಮದಿ ಕೊಡುವ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗವಾಗಲಿದೆ. ಹಿರಿಯರಿಗೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು.

ಕರ್ಕಟಕ: ನಿಮ್ಮ ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳಬೇಕಾದ ಸಮಯವಿದು. ಅಧಿಕ ಧನಲಾಭಕ್ಕಾಗಿ ನಾನಾ ಮಾರ್ಗಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಉತ್ತಮರ ಸಂಗದಿಂದ ಒಳ್ಳೆಯದೇ ಆಗುವುದು. ಸ್ವಯಂ ವೃತ್ತಿಯವರಿಗೆ ಮುನ್ನಡೆ.

ಸಿಂಹ: ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದ್ದು, ಆರ್ಥಿಕವಾಗಿ ನಿಮ್ಮ ಸ್ಥಿತಿ ಗತಿ ಸುಧಾರಿಸಲಿದೆ. ಉದ್ಯೋಗದಲ್ಲಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ರಾಜಕೀಯ ರಂಗದವರಿಗೆ ಅಪವಾದದ ಭೀತಿಯಿದೆ, ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ಹೊಸ ಯೋಜನೆಗಳಿಗೆ ಕೈ ಹಾಕುವ ಮುನ್ನ ಅಡ್ಡಿ ಆತಂಕಗಳು ಸಾಮಾನ್ಯ. ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಆತ್ಮವಿಶ್ವಾಸದಿಂದ ಮುಂದುವರಿಯಿರಿ. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಬಹುದು. ತಾಳ್ಮೆ, ಸಂಯಮ ಅಗತ್ಯ.

ತುಲಾ: ಪ್ರೇಮಿಗಳ ವಿಚಾರ ಮನೆಯವರ ಎದುರು ಬಹಿರಂಗವಾಗಲಿದೆ. ಅವಿವಾಹಿತರ ವಿವಾಹ ಮಾತುಕತೆಗಳಿಗೆ ಚಾಲನೆ ಸಿಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ವೃಶ್ಚಿಕ: ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಮಾಡುವ ನಿಮ್ಮ ಕೆಲಸಗಳು ಮುಂದೊಂದು ದಿನ ನಿಮ್ಮನ್ನು ಕಾಪಾಡಲಿದೆ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಸ್ವಯಂ ಉದ್ಯೋಗಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ಧನು: ಇಷ್ಟ ಮಿತ್ರರೊಂದಿಗೆ ಓಡಾಟ, ಇಷ್ಟ ಭೋಜನ ಮಾಡುವ ಯೋಗವಿದೆ. ಸಂಗಾತಿಯೊಂದಿಗೆ ನಿಮ್ಮ ಮನಸ್ಸಿನ ದುಃಖ ಹಂಚಿಕೊ‍ಳ್ಳುವುದರಿಂದ ಮನಸ್ಸಿನ ಭಾರ ಕಡಿಮೆಯಾಗುವುದು. ಎಷ್ಟೋ ದಿನದಿಂದ ಬಾಕಿಯಿದ್ದ ಹರಕೆ ತೀರಿಸಲು ಮುಂದಾಗುವಿರಿ.

ಮಕರ: ಅಡೆತಡೆಗಳಿದ್ದರೂ ನಿಮ್ಮ ಕಾರ್ಯಸಾಧನೆಯಾಗುವುದರಿಂದ ಚಿಂತೆ ಬೇಡ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ವಾಹನ ಸವಾರರು ಚಾಲನೆಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಕುಂಭ: ಮಹಿಳೆಯರಿಗೆ ಅನಿರೀಕ್ಷಿತ ಧನಲಾಭವಾಗುವ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುವುದು. ನಿಮ್ಮ ಚಿಂತನೆಗಳಿಗೆ ಬೆಲೆ ಸಿಗಲಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ.

ಮೀನ: ಕೌಟುಂಬಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಸದಸ್ಯರ ಅಸಮಾಧಾನಕ್ಕೆ ಕಾರಣವಾದೀತು. ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರಾದೀತು. ಆರ್ಥಿಕ ಯೋಜನೆಗಳ ಬಗ್ಗೆ ಎಚ್ಚರಿಕೆಯಿಂದ ಹೆಜ್ಜೆಯಿಡುವುದು ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಇಂದು ಶಿವನ ಈ ಮಂತ್ರವನ್ನು ತಪ್ಪದೇ ಓದಿ ಸಕಲ ಪಾಪ ಪರಿಹಾರವಾಗುತ್ತದೆ

ಮುಂದಿನ ಸುದ್ದಿ
Show comments