ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 15 ಅಕ್ಟೋಬರ್ 2020 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಅಸಹಾಕಾರ ಕೆಲಸದ ಮೇಲೆ ನಿರುತ್ಸಾಹ ತರಲಿದೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹೊಸ ವ್ಯಕ್ತಿಗಳ ಭೇಟಿ ಸಂಭವವಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.

ವೃಷಭ: ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃತ್ತಿರಂಗದಲ್ಲಿ ಕೆಲವು ಹೊಸ ಸಮಸ್ಯೆಗಳು ಕಂಡುಬರಲಿದೆ. ಮಿತ್ರರ ಸಹಾಯ ಪಡೆಯಲಿದ್ದೀರಿ. ನೂತನ ದಂಪತಿಗಳಿಗೆ ಹೊಂದಾಣಿಕೆಯ ಕೊರತೆ ಉಂಟಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕಾರ್ಯರಂಗದಲ್ಲಿ ನಿಮ್ಮ ಉದ್ದೇಶ ಈಡೇರಿಕೆ ಶ್ರಮವಹಿಸಬೇಕಾಗುತ್ತದೆ. ಕೆಲಸದ ವಿಚಾರದಲ್ಲಿ ನಿಮ್ಮನ್ನು ಪ್ರಶ್ನಿಸುವಂತೇ ಇಲ್ಲ. ಆದರೆ ದುಡುಕಿನ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಅನಗತ್ಯ ವಿಚಾರಗಳ ಬಗ್ಗೆ ತಲೆಕಡಿಸಿಕೊಳ್ಳಬೇಡಿ.

ಕರ್ಕಟಕ: ಬೇರೆಯವರು ನಿಮ್ಮ ಕೆಲಸದಲ್ಲಿ ಮೂಗು ತೂರಿಸುವುದು ನಿಮಗೆ ಇರಿಸುಮುರಿಸು ಉಂಟುಮಾಡಬಹುದು. ಆದರೆ ತಾಳ್ಮೆ, ಸಂಯಮ ಅಗತ್ಯ. ಅವಿವಾಹಿತರಿಗೆ ಯೋಗ್ಯ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಇಷ್ಟದೇವರ ಪ್ರಾರ್ಥನೆ ಮಾಡಿ.

ಸಿಂಹ: ಉದ್ದೇಶಿತ ಗುರಿ ಸಾಧನೆಗೆ ಅಡೆತಡೆಗಳು ಬಂದೀತು. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿಕೊಂಡು ಹೋಗುವ ಅಗತ್ಯವಿದೆ. ವ್ಯಾಪಾರಿಗಳಿಗೆ ಶತ್ರು ಕಾಟ ಕಂಡುಬಂದೀತು. ಆರ್ಥಿಕವಾಗಿ ಹೊಸ ಯೋಜನೆಗಳನ್ನು ಕೈಗೊಳ್ಳಲು ಕೆಲವು ದಿನ ಕಾಯುವುದು ಒಳಿತು.

ಕನ್ಯಾ: ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟನ ನಡೆಸಲಿದ್ದೀರಿ. ನಿಮ್ಮ ಮನಸ್ಸಿಗೆ ಹಿಡಿಸಿದ ವ್ಯಕ್ತಿಗಳು ನಿಮ್ಮವರಾಗುತ್ತಾರೆ. ನೂತನ ದಂಪತಿಗಳಿಗೆ ಶೀಘ್ರವೇ ಸಂತಾನ ಫಲ ಸೂಚನೆ ದೊರೆಯಲಿದೆ. ಚಿಂತೆ ಬೇಡ.

ತುಲಾ: ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಅಂದುಕೊಂಡ ರೀತಿಯಲ್ಲೇ ಸಾಗಲಿದೆ. ಪ್ರೀತಿ ಪಾತ್ರರಿಗಾಗಿ ಹೆಚ್ಚಿನ ಸಮಯ ಮೀಸಲಿಡಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆ ಬರಲಿದೆ.

ವೃಶ್ಚಿಕ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ನಿವಾರಣೆಯಾಗಲಿವೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು. ಕಿರು ಓಡಾಟ ನಡೆಸುವಿರಿ.

ಧನು: ನೆರೆಹೊರೆಯವರ ನೂರೆಂಟು ಸಲಹೆಗಳಿಗೆ ಕಿವಿಗೊಟ್ಟರೆ ನಿಮ್ಮ ನೆಮ್ಮದಿಯೇ ಹಾಳಾದೀತು. ಸ್ವಯಂ ನಿರ್ಧಾರಗಳನ್ನು ಕೈಗೊಳ್ಳುವುದು ಉತ್ತಮ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಸ್ವಯಂ ವ್ಯಾಪಾರಿಗಳಿಗೆ ಮುನ್ನಡೆ.

ಮಕರ: ಸಾಂಸಾರಿಕವಾಗಿ ನೆಮ್ಮದಿ ಕಂಡುಬರಲಿದೆ. ಪತ್ನಿ, ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಅಧಿಕ ಖರ್ಚು ವೆಚ್ಚಗಳಗಾದಂತೆ ಎಚ್ಚರಿಕೆ ವಹಿಸಿ. ಅನಿರೀಕ್ಷಿತವಾಗಿ ಮನೆಗೆ ಬಂಧು ಮಿತ್ರರ ಆಗಮನವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ನಿಮ್ಮ ಜೀವನದಲ್ಲಿ ಕೆಲವೊಂದು ಅನಿರೀಕ್ಷಿತ ಬದಲಾವಣೆಗಳಾದೀತು. ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬರುವುದು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡಬೇಡಿ. ದಿನದಂತ್ಯಕ್ಕೆ ನೆಮ್ಮದಿ.

ಮೀನ: ಉದ್ಯಮಿಗಳಿಗೆ ಲಾಭವಾಗಲಿದೆ. ಹಿತಶತ್ರುಗಳ ಹುನ್ನಾರಗಳು ಬಯಲಿಗೆ ಬರಲಿವೆ. ಮೇಲಧಿಕಾರಿಗಳೊಂದಿಗೆ ಅನಗತ್ಯ ಸಂಘರ್ಷ ಮಾಡಿಕೊಳ್ಳಬೇಡಿ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments