ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 18 ನವೆಂಬರ್ 2020 (09:04 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಯಾರ ಮೇಲೂ ಅತಿಯಾದ ಅವಲಂಬನೆ ಬೇಡ. ನಿಮ್ಮ ಕರ್ತವ್ಯದ ಬಗ್ಗೆ ಮಾತ್ರ ಗಮನಹರಿಸಿ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ನೆಮ್ಮದಿಯಾಗಲಿದೆ. ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ.

ವೃಷಭ: ಮಕ್ಕಳ ವಿಚಾರದಲ್ಲಿ ಕೆಲವೊಂದು ದೃಢ ನಿರ್ಧಾರ ಕೈಗೊಳ್ಳಲಿದ್ದೀರಿ. ನೂತನ ದಂಪತಿಗಳಿಗೆ ಪ್ರವಾಸ ಯೋಗವಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಮಿಥುನ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ದೂರದೂರಿಗೆ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ. ಅಮೂಲ್ಯವಾದ ವಸ್ತುಗಳನ್ನು ಜೋಪಾನವಾಗಿಡುವ ಹೊಣೆಗಾರಿಕೆ ನಿಮ್ಮ ಮೇಲಿರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕರ್ಕಟಕ: ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಅಡೆತಡೆಗಳು ನಿವಾರಣೆಯಾಗಲಿವೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಪಾಲಿಗೆ ಬಂದಿದ್ದೇ ಪಂಚಾಮೃತ ಎಂದು ತಿಳಿದು ಮುನ್ನಡೆಯುವುದು ಒಳ್ಳೆಯದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಕುಟುಂಬದಲ್ಲಿ ಆಪ್ತೇಷ್ಟರಿಗೆ ಆರೋಗ್ಯ ಸಮಸ್ಯೆಯುಂಟಾಗಲಿದ್ದು, ಚಿಂತೆಗೆ ಕಾರಣವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮಂದಗತಿಯಲ್ಲಿ ಕಾರ್ಯ ನಡೆಯಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾದೀತು. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಅನಿರೀಕ್ಷಿತ ಘಟನೆಗಳು ನಿಮ್ಮ ಜೀವನಕ್ಕೆ ತಿರುವು ನೀಡಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಹೊಸ ಉದ್ಯೋಗಕ್ಕಾಗಿ ಪ್ರಯತ್ನಪಡುವವರಿಗೆ ಸದ್ಯದಲ್ಲೇ ಶುಭ ಸುದ್ದಿ ಕಾದಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಗಳಿಸಲಿದ್ದೀರಿ. ಅವಿವಾಹಿತರಿಗೆ ಸದ್ಯದಲ್ಲೇ ಕಂಕಣ ಬಲ ಕೂಡಿಬರುವುದು. ಕ್ರಯ-ವಿಕ್ರಯ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.

ವೃಶ್ಚಿಕ: ಅಸಾಧ‍್ಯವೆಂದು ಕೂತಿದ್ದ ಕೆಲಸಗಳು ಇಂದು ತನ್ನಿಂತಾನೇ ನೆರವಾಗಲಿದೆ. ಹಳೆಯ ಮಿತ್ರರನ್ನು ಭೇಟಿಯಾದ ಸಂತಸ ನಿಮ್ಮದಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಬಹುದಿನಗಳ ಕನಸು ನನಸು ಮಾಡಿಕೊಳ್ಳಲಿದ್ದೀರಿ.

ಧನು: ಬಯಸಿದ್ದೊಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ನಿಮ್ಮದಾಗಲಿದೆ. ಆರ್ಥಿಕವಾಗಿ ನಾನಾ ರೀತಿಯ ತಾಪತ್ರಯಗಳು ಎದುರಾದೀತು. ಹಾಗಿದ್ದರೂ ಕೌಟುಂಬಿಕವಾಗಿ ಸಂತೋಷಕ್ಕೆ ಕೊರತೆಯಿರದು. ಚಿಂತೆ ಬೇಡ.

ಮಕರ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸವಾಗಲಿದೆ. ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವೃತ್ತಿರಂಗದಲ್ಲಿ ನಿಮಗೆ ಅನುಕೂಲಕರವಾದ ವಾತಾವರಣವಿರಲಿದೆ. ತಾಳ್ಮೆಯಿರಲಿ.

ಕುಂಭ: ಏನೇ ತೊಂದರೆಯಿದ್ದರೂ ನಿಮ್ಮ ಪಾಲಿಗೆ ಬರಬೇಕಾದ್ದು ಬಂದೇ ಬರುತ್ತದೆ. ಅನಗತ್ಯವಾಗಿ ಚಿಂತೆಗಳಿಗೆ ಕಡಿವಾಣ ಹಾಕಿ. ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು.

ಮೀನ: ಅನಿವಾರ್ಯವಾಗಿ ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ. ನಿಮ್ಮ ಸತತ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಯೋಗವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments