ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 22 ಫೆಬ್ರವರಿ 2021 (08:42 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬಯಸಿದ ವಸ್ತು ತಾನಾಗಿಯೇ ನಿಮ್ಮ ಕೈ ಸೇರುವ ಸಂದರ್ಭ ಒದಗಿಬರಲಿದೆ. ಮಾನಸಿಕವಾಗಿ ಬೇಡದ ಯೋಚನೆಗಳನ್ನು ಬದಿಗಿಟ್ಟು ಹಗುರವಾಗಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಚಿಂತೆ ಬೇಡ.

ವೃಷಭ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಸರಿ ಹೋಗಲಿವೆ. ಸರಕಾರಿ ಕೆಲಸದವರಿಗೆ ಮುಂಬಡ್ತಿ ಯೋಗವಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು.

ಮಿಥುನ: ನಿಮ್ಮ ಅಹಂ ಗುಣಗಳನ್ನು ಬದಿಗಿಟ್ಟು ಕೆಲಸ ಮಾಡಿದರೆ ನಿಮ್ಮ ದಾರಿ ಸುಗಮವಾಗಲಿದೆ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಕರ್ಕಟಕ: ನಿಮ್ಮ ಸಮಕಾಲೀನರ ಜೊತೆ ಕೂಡುವ ಯೋಗ ಕೂಡಿಬರಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ಯೋಗ್ಯ ವಯಸ್ಕರಿಗೆ ಉತ್ತಮ ಸಂಬಂಧಗಳು ಕೂಡಿಬರಲಿವೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಯ ಬಗ್ಗೆ ಅಸೂಯೆಪಡುವವರು ಇರುತ್ತಾರೆ. ಅವರ ಬಗ್ಗೆ ಉಪೇಕ್ಷೆ ಮಾಡುವುದೇ ಉತ್ತಮ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ದೂರ ಸಂಚಾರಕ್ಕೆ ಸಿದ್ಧರಾಗಿದ್ದರೆ, ದಿಡೀರ್ ರದ್ದಾಗಲಿದೆ. ಅನಿವಾರ್ಯ ಸಂದರ್ಭಗಳಲ್ಲಿ ಕೆಲವೊಂದು ತ್ಯಾಗ ಮಾಡಬೇಕಾಗಿ ಬರುತ್ತದೆ. ಸಂಗಾತಿಯ ಸಂತೋಷಕ್ಕೆ ಬೆಲೆ ಕೊಡಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ತುಲಾ: ನಿಮ್ಮ ಪಾಲಿಗೆ ಬರಬೇಕಾದ ವಸ್ತು, ವ್ಯಕ್ತಿಗಳು ಬೇಡವೆಂದರೂ ಬಂದೇ ಬರುತ್ತಾರೆ. ಅದರ ಬಗ್ಗೆ ಅನಗತ್ಯ ಚಿಂತೆ ಬೇಡ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಪತ್ನಿಯ ಪ್ರೀತ್ಯಾದರಗಳಿಗೆ ಪಾತ್ರರಾಗಲಿದ್ದೀರಿ.

ವೃಶ್ಚಿಕ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಯೋಚನೆಗಳು ಉಪಯೋಗಕ್ಕೆ ಬರಲಿವೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಇಷ್ಟಭೋಜನ ಪ್ರಾಪ್ತಿಯಾಗಲಿದೆ.

ಧನು: ಬೇರೆಯವರ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸುವ ಯತ್ನ ಬೇಡ. ಇದರಿಂದ ವೈಯಕ್ತಿಕವಾಗಿ ಮಾನಹಾನಿಯಾದೀತು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಲಹೆಗಳನ್ನು ಪಾಲಿಸಬೇಕಾಗುತ್ತದೆ.

ಮಕರ: ಮನಸ್ಸಿಗೆ ಹಿಡಿಸಿದ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೈ ಹಿಡಿದ ಕೆಲಸಗಳು ಸುಗಮವಾಗಲಿದೆ. ಕಟ್ಟಡ ಕಾಮಗಾರಿ ಕೆಲಸಕ್ಕೆ ಚಾಲನೆ ನೀಡಬಹುದು.

ಕುಂಭ: ಸಂಗಾತಿಯ ಮಾತಿಗೆ ಬೆಲೆಕೊಟ್ಟು ಕೆಲವೊಂದು ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗಳು ದೂರವಾಗಲಿದೆ. ಮನೆ ರಿಪೇರಿ, ವಾಹನ ಖರೀದಿ ಇತ್ಯಾದಿ ಕೆಲಸಗಳಿಗೆ ವೆಚ್ಚ ಮಾಡಲಿದ್ದೀರಿ. ತಾಳ್ಮೆಯಿರಲಿ.

ಮೀನ: ನೀವು ಇಂದು ಕೈಗೊಳ್ಳುವ ಪ್ರತಿ ನಿರ್ಧಾರವೂ ಎಚ್ಚರಿಕೆಯಿಂದಿರಲಿ. ಒಂದನ್ನು ಮಾಡಲು ಹೋಗಿ ಇನ್ನೊಂದನ್ನು ಕಳೆದುಕೊಳ್ಳುವ ಸ್ಥಿತಿ ತಂದುಕೊಳ್ಳಬೇಡಿ. ಸ್ವಯಂ ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಸಿಗಲಿದೆ. ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments