ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 16 ಏಪ್ರಿಲ್ 2021 (08:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಇಷ್ಟಾರ್ಥ ಸಿದ್ಧಿಗಾಗಿ ಬೇರೆಯವರ ಸಹಾಯ ಪಡೆದುಕೊಳ್ಳಲಿದ್ದೀರಿ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳಿಂದ ಚಿಂತೆಯಾಗುವುದು. ತಾಳ್ಮೆಯಿರಲಿ.

ವೃಷಭ: ಬಾಕಿ ಹಣ ಪಾವತಿ ಮಾಡುವ ಚಿಂತೆ ಕಾಡಲಿದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಮನಸ್ಸಿಗೆ ಹಿಡಿಸಿದವರ ಜೊತೆ ಭಾವನೆ ಹಂಚಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ:ವ್ಯಾಪಾರೀ ವರ್ಗದವರಿಗೆ ಉನ್ನತ ವರ್ಗಕ್ಕೇರುವ ಅವಕಾಶಗಳು ತೋರಿಬರಲಿವೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಅಂದುಕೊಂಡಂತೇ ನೆರವೇರಲಿದೆ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶ ಸ್ವಲ್ಪದರಲ್ಲೇ ತಪ್ಪಿ ಹೋಗಿ ನಿರಾಸೆಯಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಿಂಹ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬಂದೀತು. ವಯಸ್ಸಾದವರಿಗೆ ಆರೋಗ್ಯ ಸಮಸ್ಯೆ ಕಂಡುಬಂದೀತು. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ತಪ್ಪದು. ತಾಳ್ಮೆ ಅಗತ್ಯ.

ಕನ್ಯಾ: ಪ್ರೀತಿ ಪಾತ್ರರ ಅನಾರೋಗ್ಯ ಚಿಂತೆಗೆ ಕಾರಣವಾಗಲಿದೆ. ವೈಯಕ್ತಿಕವಾಗಿ ನಿಮಗೆ ಬೇಸರವಾಗುವಂತಹ ಘಟನೆಗಳು ನಡೆದೀತು. ಹಾಗಿದ್ದರೂ ಸಂಗಾತಿಯ ಸಹಕಾರ ನೆಮ್ಮದಿಕೊಡಲಿದೆ. ಮಕ್ಕಳಿಂದ ಸಂತೋಷ ಸಿಗುವುದು.

ತುಲಾ: ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ಮನಸ್ಸಿನ ಭಾವನೆಗಳಿಗೆ ವಿರುದ್ಧವಾಗಿ ನಡೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾದೀತು.

ವೃಶ್ಚಿಕ: ವೈಯಕ್ತಿಕ ಹಿತಾಸಕ್ತಿಗಳನ್ನು ಪ್ರೀತಿ ಪಾತ್ರರಿಗಾಗಿ ತ್ಯಾಗಮಾಡಬೇಕಾಗಿಬರಬಹುದು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗೆ ಸಿದ್ಧತೆ ನಡೆಸುವಿರಿ.

ಧನು: ವೃತ್ತಿರಂಗದಲ್ಲಿ ನಿಮಗೆ ತೊಡಕಾಗಿದ್ದವರಿಂದ ತೊಂದರೆಗಳು ಎದುರಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮಕರ: ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗುವುದು. ಪ್ರೇಮಿಗಳ ಗುಟ್ಟು ಮನೆಯವರೆದುರು ಬಯಲಾಗಲಿದೆ. ವ್ಯಾಪಾರೀ ವರ್ಗದವರಿಗೆ ಮುನ್ನಡೆಯ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಇನ್ನೊಬ್ಬರಿಗೆ ಸಾಂತ್ವನ ಹೇಳುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನಕ್ಕೇರುವ ಯೋಗ ನಿಮ್ಮದಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ದತೆ ನಡೆಸಲಿದ್ದೀರಿ.

ಮೀನ: ಕಾರ್ಯಕ್ಷೇತ್ರದಲ್ಲಿ ಉತ್ಸಾಹದಿಂದ ತೊಡಗಿಸಿಕೊಳ್ಳಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಕ್ಕೀತು. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments