Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 3 ಅಕ್ಟೋಬರ್ 2022 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ರಾಜಕೀಯ ರಂಗದಲ್ಲಿರುವವರಿಗೆ ಸ್ಥಾನ ಮಾನ ವೃದ್ಧಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಆತ್ಮೀಯರನ್ನು ಭೇಟಿ ಮಾಡಿದ ಸಂತೋಷ ನಿಮ್ಮದಾಗಲಿದೆ.

ವೃಷಭ: ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಹಳೆಯ ಮಿತ್ರರನ್ನು ಬಹಳ ದಿನಗಳ ನಂತರ ಭೇಟಿ ಮಾಡಿದ ಸಂತೋಷ ನಿಮ್ಮದಾಗಲಿದೆ. ತಾಂತ್ರಿಕ ವೃತ್ತಿಯಲ್ಲಿರುವವರಿಗೆ ಬಿಡುವಿನ ಖುಷಿ ಸಿಗುವುದು. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕರ್ಕಟಕ: ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಆಪ್ತರೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ದೂರ ಸಂಚಾರಕ್ಕೆ ಸಿದ್ಧತೆ ಮಾಡಲಿದ್ದೀರಿ.

ಸಿಂಹ: ಮನಸ್ಸಿನಲ್ಲಿರುವ ಮಾತುಗಳನ್ನು ಪ್ರೀತಿ ಪಾತ್ರರ ಮುಂದೆ ಹೇಳಿಕೊಳ್ಳಲು ಅವಕಾಶ ಸಿಗಲಿದೆ. ಸ್ವಯಂ ವೃತ್ತಿಯವರಿಗೆ ಲಾಭವಾಗುವುದು. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ತಾಳ್ಮೆಯಿರಲಿ.

ಕನ್ಯಾ: ಅಂದುಕೊಂಡ ಕೆಲಸ ಪೂರ್ತಿ ಮಾಡಲು ಕೆಲವೊಂದು ಅಡೆತಡೆಗಳು ಎದುರಾದೀತು. ಕಾರ್ಯರಂಗದಲ್ಲಿ ಆಪ್ತರೊಂದಿಗೆ ಸಂಘರ್ಷವಾಗುವ ಸಾಧ‍್ಯತೆ. ಮಾತಿನ ಮೇಲೆ ನಿಗಾ ಇರಲಿ. ದಿನದಂತ್ಯಕ್ಕೆ ನೆಮ್ಮದಿ.

ತುಲಾ: ಆಪ್ತರ ಕಷ್ಟಗಳಿಗೆ ಸ್ಪಂದಿಸುವ ನಿಮ್ಮ ಗುಣ ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಇನ್ನೊಬ್ಬರ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಎಷ್ಟೇ ಎಚ್ಚರಿಕೆಯಿಂದ ಕೆಲಸ ಮಾಡಿದರೂ ಕೆಲವೊಂದು ಅನಾಹುತಗಳನ್ನು ನಿಮ್ಮಿಂದ ತಪ್ಪಿಸಲಾಗದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ.

ಧನು: ಸ್ವಯಂ ವೃತ್ತಿಯವರಿಗೆ ಆದಾಯ ವೃದ್ಧಿಗೆ ಅವಕಾಶ ಸಿಗಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕ ಸಂತೋಷವಿರಲಿದೆ. ಭವಿಷ್ಯದ ದೃಷ್ಟಿಯಿಂದ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲು ಸೂಕ್ತ ಸಮಯ.

ಮಕರ: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಪಶ್ಚಾತ್ತಾಪ ಪಡುವುದರಲ್ಲಿ ಅರ್ಥವಿಲ್ಲ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ನೂತನ ಗೃಹ ಪ್ರವೇಶ ಮಾಡಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕುಂಭ: ಹಿಂದೆ ಇದ್ದ ಆರೋಗ್ಯ ಸಮಸ್ಯೆ ಮತ್ತೆ ಕಾಣಿಸಿಕೊಳ್ಳುವ ಸಂಭವ. ಆದರೂ ಆತ್ಮೀಯರು ನಿಮ್ಮ ಕಷ್ಟಗಳಿಗೆ ನೆರವಾಗಲಿದ್ದಾರೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.

ಮೀನ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಏಳಿಗೆ ಕಂಡುಬರುವುದು. ಸುದೀರ್ಘ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ವಿಶೇಷ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

Subramanya Mantra: ಸುಬ್ರಹ್ಮಣ್ಯ ಸ್ವಾಮಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಪಾಂಡುರಂಗಾಷ್ಟಕಂ ಕನ್ನಡದಲ್ಲಿ ಇಲ್ಲಿದೆ

Sai Baba astakam: ಸಾಯಿಬಾಬ ಪ್ರಾರ್ಥನಾಷ್ಟಕಂ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments