ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 26 ಡಿಸೆಂಬರ್ 2022 (08:50 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಇನ್ನೊಬ್ಬರ ವಿಚಾರಗಳಿಗೆ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ.  ಪರರ ವಸ್ತುಗಳ ಬಗ್ಗೆ ಮೋಹ ಬೇಡ. ತಾಂತ್ರಿಕ ವೃತ್ತಿಯಲ್ಲಿರುವವರಿಗೆ ಮುನ್ನಡೆ. ಸರಕಾರೀ ಕೆಲಸಗಳಲ್ಲಿ ಜಯ ಸಿಗುವುದು.

ವೃಷಭ: ಪರರ ಸಂಪತ್ತಿನ ವ್ಯವಹಾರದಲ್ಲಿ ಎಚ್ಚರಿಕೆ. ಸ್ತ್ರೀಯರಿಂದ ಕೆಲಸಗಳಿಗೆ ಸಹಾಯ ಸಿಗಲಿದೆ. ಮಕ್ಕಳ ವಿದ್ಯಾಭ‍್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಭೂಮ್ಯಾದಿ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಗೆ ಸಿದ್ಧರಾಗಬೇಕಾಗುತ್ತದೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕರ್ಕಟಕ: ಹಣಕಾಸಿನ ವಿಚಾರದಲ್ಲಿ ಕೊಂಚ ಎಚ್ಚರ ತಪ್ಪಿದರೂ ವಂಚನೆಗೊಳಗಾಗುವ ಸಾಧ‍್ಯತೆ. ಅಧ್ಯಯನಶೀಲರಿಗೆ ಉನ್ನತ ಅವಕಾಶಗಳು ಸಿಗಲಿವೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ತಾಳ್ಮೆಯಿರಲಿ.

ಸಿಂಹ: ಮನಸ್ಸಿನಲ್ಲಿರುವ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟ ಭೋಜನ ಮಾಡುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿದರೆ ಉತ್ತಮ.

ಕನ್ಯಾ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಮನಸ್ಸಿಗೆ ಸಂತೋಷ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ನಂಬಿಕೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಿ.

ತುಲಾ: ಹೊಸದಾಗಿ ಪರಿಚಯವಾದ ವ್ಯಕ್ತಿಗಳಿಂದ ನಿಮ್ಮ ಭವಿಷ್ಯಕ್ಕೆ ಅನುಕೂಲವಾಗಲಿದೆ. ಬಾಡಿಗೆ ಮನೆಯಲ್ಲಿರುವವರಿಗೆ ಮಾಲಿಕರಿಂದ ಕಿರಿ ಕಿರಿ ಉಂಟಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಹಿಂದೆ ಮಾಡಿದ ಒಳ್ಳೆಯ ಕೆಲಸಗಳ ಫಲ ಅನುಭವಿಸಲಿದ್ದೀರಿ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಧನು: ನಿಮ್ಮಿಂದ ಹಿಂದೆ ಸಹಾಯ ಪಡೆದವರಿಂದ ಪ್ರತ್ಯುಪಕಾರ ಲಭಿಸಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಮುನ್ನಡೆ.

ಮಕರ: ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ತೋರಿಬಂದೀತು. ವ್ಯಾವಹಾರಿಕವಾಗಿ ಮುನ್ನಡೆಯಿದ್ದರೂ ಹಿತಶತ್ರುಗಳ ಕಾಟ ಕಂಡುಬರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಕುಂಭ: ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ಕಾರ್ಯರಂಗದಲ್ಲಿ ನಿಮ್ಮ ಅನುಕೂಲಕ್ಕಾಗಿ ಕೆಲವೊಂದು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಿರಲಿದೆ.

ಮೀನ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಮಹಿಳೆಯರಿಗೆ ಉನ್ನತ ಸ್ಥಾನ ಮಾನದ ನಿರೀಕ್ಷೆ. ಕೈಗೊಂಡ ಕೆಲಸಗಳಿಗೆ ತೊಡಕುಂಟಾದರೂ ಅಂತಿಮ ಜಯ ನಿಮ್ಮದಾಗಲಿದೆ. ಅನಗತ್ಯ ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಮುಂದಿನ ಸುದ್ದಿ
Show comments