ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 30 ಆಗಸ್ಟ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕಾರ್ಯ ವಿಳಂಬಗತಿಯಲ್ಲಿ ಸಾಗಿದರೂ ಯಶಸ್ಸು ನಿಮ್ಮದಾಗುವುದು. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗ.

ವೃಷಭ: ಬರಬೇಕಾದ ಬಾಕಿ ವಸೂಲಾತಿ ಬಗ್ಗೆ ಚಿಂತೆಯಾಗಲಿದೆ. ಗೃಹಿಣಿಯರಿಗೆ ಮನೆಯಲ್ಲಿ ತಮಗೆ ಮನ್ನಣೆ ಇಲ್ಲವೆಂಬ ಕೊರಗು ಕಾಡೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಯೋಜನಾಬದ್ಧವಾಗಿ ಕೆಲಸ ಮಾಡುವುದರಿಂದ ಕಾರ್ಯಗಳು ಸುಸ್ರೂತ್ರವಾಗಿ ನಡೆಯಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಮಾತಿನಲ್ಲೇ ಇತರರಿಗೆ ಮೋಡಿ ಮಾಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಉದ್ಯೋಗ, ವ್ಯವಹಾರದಲ್ಲಿ ಸಹೋದ್ಯೋಗಿಗಳ ಸಹಕಾರ ಕಂಡುಬರಲಿದೆ. ಸರಕಾರೀ ನೌಕರರಿಗೆ ಮುಂಬಡ್ತಿ ಯೋಗ. ಸಾಲಗಾರರ ಕಾಟದಿಂದ ಮುಕ್ತಿ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಕನ್ಯಾ: ಸೇವಾ ಮನೋಭಾವಾದವರಿಗೆ ಒಳಿತೇ ಆಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದಾನ ಧರ್ಮಾದಿಗಳು ಮನಸ್ಸಿಗೆ ಖುಷಿ ನೀಡಲಿವೆ. ಹಣಕಾಸಿನ ಹರಿವಿಗೆ ತೊಂದರೆಯಾಗದು.

ತುಲಾ: ದೂರದ ವ್ಯವಹಾರಗಳಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಹೆಚ್ಚಿನ ಹೊಣೆಗಾರಿಕೆ ಸಿಗಲಿದೆ.

ವೃಶ್ಚಿಕ: ಭವಿಷ್ಯದ ಬಗ್ಗೆ ಕೆಲವು ಮಹತ್ವದ  ತೀರ್ಮಾನ ಕೈಗೊಳ್ಳುವ ಸಮಯ. ಮಕ್ಕಳು ಎದುರುತ್ತರ ನೀಡಿಯಾರು. ತಾಳ್ಮೆ, ಸಂಯಮ ಅಗತ್ಯ. ಸಾಹಿತ್ಯ, ಅಧ್ಯಯನಾಸಕ್ತರಿಗೆ ಉನ್ನತ ಅವಕಾಶಗಳು ಕಂಡುಬರಲಿದೆ.

ಧನು: ನೀವು ಸರಿಯಾದ ದಾರಿಯಲ್ಲಿ ನಡೆಯುತ್ತಿದ್ದೀರೋ ಇಲ್ಲವೋ ಎಂಬ ಸಂಶಯ ಕಾಡೀತು. ಬಂಧು ಮಿತ್ರರನ್ನು ಭೇಟಿ ಮಾಡಿದ ಸಂತೋಷ ನಿಮ್ಮದಾಗಲಿದೆ. ದೂರದ ವ್ಯವಹಾರಗಳಿಂದ ಲಾಭವಾಗಲಿದೆ.

ಮಕರ: ಹೊಸ ಕೆಲಸ ಹುಡುಕಿಕೊಳ್ಳುವ ನಿಮ್ಮ ಪ್ರಯತ್ನಕ್ಕೆ ಹಿನ್ನಡೆಯಾದೀತು. ಆಪ್ತರ ಸಲಹೆ ಪಾಲಿಸುವುದು ಉತ್ತಮ. ಮಕ್ಕಳಿಂದ ಉಡುಗೊರೆ ನಿರೀಕ್ಷಿಸಬಹುದು. ಮೇಲಧಿಕಾರಿಗಳಿಂದ ಪ್ರೋತ್ಸಾಹ ಕಂಡುಬರುವುದು.

ಕುಂಭ: ಕೃಷಿ, ಹೈನುಗಾರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಲಾಭ. ಮಕ್ಕಳ ವಿವಾಹದ ಬಗ್ಗೆ ಚಿಂತನೆ ನಡೆಸಲಿದ್ಧೀರಿ. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸುವಿರಿ.

ಮೀನ: ಭಗವಂತನ ಕೃಪೆಯಿಂದ ಬೆಟ್ಟದಂತೆ ಬಂದ ಕಷ್ಟ ಸುಲಭವಾಗಿ ನಿವಾರಣೆಯಾಗಲಿದೆ. ಸ್ನೇಹಿತರಿಂದ ಸಕಾಲದಲ್ಲಿ ಹಣಕಾಸಿನ ನೆರವು ಸಿಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆ ವೃದ್ಧಿ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧ ಗ್ರಹ ದೋಷವಿದ್ದಾಗ ಯಾವ ಆಹಾರ ಸೇವಿಸಬೇಕು, ಬಟ್ಟೆ ಧರಿಸಬೇಕು ತಿಳಿಯಿರಿ

ಬುಧವಾರ ಶಾರದಾ ದೇವಿಯ ಈ ಪ್ರಾರ್ಥನಾ ಮಂತ್ರ ಹೇಳಿ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಜ್ಯೋತಿಷ್ಯ ಪ್ರಕಾರ ಕುಂಭ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಮುಂದಿನ ಸುದ್ದಿ
Show comments