ಕುಂಭ ಮದುವೆ ಯಾಕೆ ಮಾಡುತ್ತಾರೆ ತಿಳಿಯಿರಿ

Krishnaveni K
ಮಂಗಳವಾರ, 30 ಜನವರಿ 2024 (10:01 IST)
WD
ಬೆಂಗಳೂರು: ವಿವಾಹ ಸಂದರ್ಭದಲ್ಲಿ ಕೆಲವರು ಜ್ಯೋತಿಷಿಗಳ ಸಲಹೆ ಪ್ರಕಾರ ಕುಂಭ ಮದುವೆ ಮಾಡುತ್ತಾರೆ. ಹೀಗಂದರೆ ಏನು? ಯಾಕೆ ಮಾಡಬೇಕು? ನೋಡೋಣ.

ಜಾತಕದಲ್ಲಿ ಕುಜ ದೋಷ ಅಥವಾ ಎರಡು ಮದುವೆಯ ಯೋಗವಿದ್ದಾಗ ಕುಂಭ ವಿವಾಹ ಮಾಡುವುದು ಪದ್ಧತಿ. ವಿಶೇಷವಾಗಿ ಎರಡನೇ ಮದುವೆ ಯೋಗವಿರುವ ಕನ್ಯೆಗೆ ದೋಷ ಪರಿಹಾರಕ್ಕಾಗಿ ಕುಂಭ ಮದುವೆ ಮಾಡಿಸಲಾಗುತ್ತದೆ. ಮಣ್ಣಿನ ಮಡಕೆಯನ್ನು ಮದುಮಗನಂತೆ ಸಿಂಗರಿಸಿ ತಾಳಿ ಕಟ್ಟಿ ಶಾಸ್ತ್ರೋಸ್ತ್ರಕವಾಗಿ ಮದುವೆ ಶಾಸ್ತ್ರ ಮಾಡಿಸಲಾಗುತ್ತದೆ.

ಮದುವೆ ಸಂದರ್ಭದಲ್ಲಿ ಮಾಡುವ ಎಲ್ಲಾ ವಿಧಿ ವಿಧಾನಗಳನ್ನು ಈ ಸಂದರ್ಭದಲ್ಲಿ ಮಡಕೆಯೊಂದಿಗೆ ಮಾಡಲಾಗುತ್ತದೆ. ಕನ್ಯಾ ದಾನ, ಹೂ ಹಾರ ಬದಲಾವಣೆ, ತಾಳಿ ಶಾಸ್ತ್ರ ಇತ್ಯಾದಿ ಮದುವೆಯ ಎಲ್ಲಾ ಶಾಸ್ತ್ರಗಳನ್ನೂ ಮಾಡಲಾಗುತ್ತದೆ. ಮದುವೆಯ ಶಾಸ್ತ್ರ ಮುಗಿದ ಮೇಲೆ ಮಡಕೆಯನ್ನು ಒಡೆದು ನೀರಿನಲ್ಲಿ ಬಿಟ್ಟರೆ ಮದುವೆ ಶಾಸ್ತ್ರ ಮುಗಿದಂತೆ.

ಈ ಶಾಸ್ತ್ರದ ಬಳಿಕ ದೋಷ ಪರಿಹಾರವಾದಂತೆ. ಹಾಗೂ ದೋಷವಿದ್ದ ಯುವತಿ ತಾನು ಬಯಸಿದ ವರನನ್ನು ನಿರಾತಂಕವಾಗಿ ಮದುವೆಯಾಗಬಹುದು. ಒಂದು ವೇಳೆ ಈ ಪರಿಹಾರ ಮಾಡದೇ ಮದುವೆಯಾದಲ್ಲಿ ಅಂತಹ ಕನ್ಯೆಗೆ ದಾಂಪತ್ಯ ಜೀವನದಲ್ಲಿ ತೊಂದರೆ ಎದುರಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಶಿವರಾತ್ರಿಯಂದು ರಾತ್ರಿ ವೇಳೆ ಮಾಡಲೇಬೇಕಾದ ವಿಚಾರಗಳು ಇಲ್ಲಿದೆ

ಶಿವರಾತ್ರಿ 2026 ಪೂಜೆ ಯಾವಾಗ ಮಾಡಬೇಕು, ಪ್ರಶಸ್ತ ಸಮಯದ ಮಾಹಿತಿ ಇಲ್ಲಿದೆ

ಶನಿ ದೋಷ ನಿವಾರಣೆಗೆ ಇಂದು ಆಂಜನೇಯ ಈ ಮಂತ್ರ ಓದಿ

ಇದೇ 15ರಂದು ಮಹಾಶಿವರಾತ್ರಿ, ಪೂಜಾ ಮೂಹೂರ್ತದ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments