Webdunia - Bharat's app for daily news and videos

Install App

'ಪದ್ಮಾವತಿ' ಇಂದ 'ಪದ್ಮಾವತ್' ಆದರೂ ಬಿಡುಗಡೆ ಭಾಗ್ಯವಿಲ್ಲ...!?

ನಾಗಶ್ರೀ ಭಟ್
ಮಂಗಳವಾರ, 9 ಜನವರಿ 2018 (18:49 IST)
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರಕ್ಕೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಚಿತ್ರವನ್ನು ರಾಜಸ್ಥಾನದಲ್ಲಿ ಬಿಡುಗಡೆ ಮಾಡುವಂತಿಲ್ಲ ಎಂದು ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೆ ಹೇಳಿದ್ದಾರೆ.

ಈ ಹಿಂದೆ ಪದ್ಮಾವತಿ ಎಂಬ ಹೆಸರಿನ ಮೂಲಕ ಬಾರಿ ಈ ಚಿತ್ರ ಬಾರಿ ವಿವಾದಕ್ಕೆ ಕಾರಣವಾಗಿತ್ತು. ನಂತರ ಅದನ್ನು  ಪದ್ಮಾವತಿಯಿಂದ ಪದ್ಮಾವತ್ ಎಂದು ಮರುನಾಮಕರಣ ಮಾಡಿ ಬಿಡುಗಡೆಗೆ ಸಿದ್ಧಗೊಳಿಸಿದರೂ ಈ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
 
ಹೌದು ಇದೇ ಜನೇವರಿ 25 ರಂದು ಪದ್ಮಾವತ್ ಚಿತ್ರ ಬಿಡುಗಡೆಯಾಗುತ್ತಿದೆ. ಈ ಕುರಿತಂತೆ ಹೇಳಿಕೆ ನೀಡಿರುವ ಗುಜರಾತ್ ಮುಖ್ಯಮಂತ್ರಿ ವಸುಂಧರಾ ರಾಜೆ, ರಾಣಿ ಪದ್ಮಿನಿಯ ತ್ಯಾಗವು ರಾಜ್ಯದ ಗೌರವ ಮತ್ತು ಘನತೆಯ ಪ್ರತೀಕವಾಗಿದೆ. ಆದ್ದರಿಂದ ರಾಣಿ ಪದ್ಮಿನಿ ಇತಿಹಾಸದಲ್ಲಿ ಒಂದು ಅಧ್ಯಾಯ ಮಾತ್ರವಲ್ಲ ಅದು ನಮ್ಮ ರಾಜ್ಯದ ಘನತೆಯಾಗಿದ್ದು ಅದಕ್ಕೆ ದಕ್ಕೆ ಆಗದಂತೆ ನೆಡೆದುಕೊಳ್ಳುವುದು ನಮ್ಮೆಲ್ಲರ ಹೊಣೆ ಹಾಗಾಗೀ ಈ ಚಿತ್ರವು ಅವರ ಕುರಿತಾಗಿದ್ದು, ಅವರಿಗೆ ಅಪಮಾನವಾಗುವುದಕ್ಕೆ ನಾವು ಆಸ್ಪತ ಕೊಡುವುದಿಲ್ಲ ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೇ ಪದ್ಮಾವತ್ ಚಿತ್ರವು ಹಿಂದಿನ ಕಾಲದ ರಜಪೂತ ಸಂಸ್ಥಾನಕ್ಕೆ ಸೇರಿದ ಕಥೆಯಾಗಿದ್ದು, ರಾಜ್ಯದ ಜನರ ಭಾವನೆಗಳನ್ನು ಗಮನದಲ್ಲಿರಿಸಿಕೊಂಡು ಈ ಚಿತ್ರವನ್ನು ರಾಜಸ್ಥಾನದಲ್ಲಿ ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
 
ಹಲವಾರು ರಜಪೂತ ಸಂಸ್ಥೆಗಳು ಸೇರಿಕೊಂಡು 'ಪದ್ಮಾವತ್' ಬಿಡುಗಡೆಯನ್ನು ವಿರೋಧಿಸಿ ಪ್ರತಿಭಟಿಸಿರುವುದು ಮಾತ್ರವಲ್ಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ಮಾಡಿದಲ್ಲಿ ಪೆಟ್ರೋಲ್‌ ಸುರಿದು ಬಂದು ಬೆಂಕಿ ಹಾಕುವುದಾಗಿ ಬೆದರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ರಾಷ್ಟ್ರೀಯ ರಜಪೂತರ ಕರ್ಣಿ ಸೇನಾ ಅಧ್ಯಕ್ಷರಾದ ಸುಖದೇವ್ ಸಿಂಗ್ ಗೋಗೆಮಿಡಿ ಅವರು ನಮ್ಮ ತಾಯಿ ರಾಣಿ ಪದ್ಮಾವತಿಯ ಘನತೆಗೆ ದಕ್ಕೆ ಬರುವುದನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದಷ್ಟೇ ಅಲ್ಲ ಒಂದು ವೇಳೆ ಈ ಚಿತ್ರವನ್ನು ಜ. 25ಕ್ಕೆ ಪ್ರದರ್ಶಿಸಲು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ಸಂಸ್ಥೆ ಅನುವು ಮಾಡಿದಲ್ಲಿ ಭಾರತವೇ ಹೊತ್ತಿ ಉರಿಯಲಿದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ.
 
ಚಿತ್ರ ನಿರ್ಮಾಣ ಹಂತದಿಂದ ಒಂದಲ್ಲಾ ಒಂದು ರೀತಿಯ ವಿವಾದಗಳಿಂದ ಸಾಕಷ್ಟು ಸಂಕಷ್ಟ ಎದುರಿಸಿದ್ದ ಈ ಚಿತ್ರಕ್ಕೆ ಬಿಡುಗಡೆ ಸಮಯದಲ್ಲಿ ಈ ಹೇಳಿಕೆಯು ದೊಡ್ಡ ಸವಾಲಾಗಿ ಪರಿಣಿಮಿಸಿದೆ. ಒಟ್ಟಿನಲ್ಲಿ ಚಿತ್ರವನ್ನು ಕಾತುರದಿಂದ ಕಾಯುತ್ತಿರುವ ಅಭಿಮಾನಿಗಳ ಪಾಲಿಗೆ ಮಾತ್ರ ಈ ವಿವಾದವು ನಿರಾಸೆ ಮಾಡಿರುವುದರಲ್ಲಿ ಎರಡು ಮಾತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

ಮುಂದಿನ ಸುದ್ದಿ
Show comments