Webdunia - Bharat's app for daily news and videos

Install App

ಬಜೆಟ್ ನಲ್ಲಿ ಅರುಣ್ ಜೇಟ್ಲಿಯಿಂದ ರೈತರಿಗೆ ಬಂಪರ್ ಕೊಡುಗೆ

Webdunia
ಗುರುವಾರ, 1 ಫೆಬ್ರವರಿ 2018 (11:30 IST)
ನವದೆಹಲಿ: ಇದುವರೆಗೆ ಉದ್ದಿಮೆದಾರರ ಪರ ಎಂದೇ ಬಿಂಬಿತವಾಗಿದ್ದ ಕೇಂದ್ರದ ಮೋದಿ ಸರ್ಕಾರವನ್ನು ರೈತರ ಪರ ಎಂದು ಬದಲಾಯಿಸಲು ಈ ಬಜೆಟ್ ನಲ್ಲಿ ವಿತ್ತ ಸಚಿವರು ಪ್ರಯತ್ನಪಟ್ಟಿದ್ದಾರೆ.
 

ರೈತರ ಕಲ್ಯಾಣವೇ ನಮ್ಮ ಗುರಿ ಎಂದು ಆರಂಭದಲ್ಲಿಯೇ ವಿತ್ತ ಸಚಿವರು ಘೋಷಿಸಿದ್ದಾರೆ. ರೈತರ ಬೆಳೆಗಳಿಗೆ ಉತ್ತಮ ಬೆಲೆ, ರೈತರ ಆದಾಯ ಹೆಚ್ಚಿಸುವ ಯೋಜನೆಗಳಿಗೆ ಚಾಲನೆ ನೀಡುವುದಾಗಿ ಹೇಳಿದ್ದಾರೆ.

ರಾಜ್ಯ ಸರ್ಕಾರಗಳ ಸಹಯೋದೊಂದಿಗೆ ರೈತರ ಕಲ್ಯಾಣ ಯೋಜನೆಗಳು, ಎಪಿಎಂಸಿ ಮಾರುಕಟ್ಟೆಗಳ ಡಿಜಿಟಲೀಕರಣ, ಸಾವಯವ ಕೃಷಿಗೆ ಉತ್ತೇಜನ, ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಪ್ರೋತ್ಸಾಹ ನೀಡುವುದು ನಮ್ಮ ಗುರಿಯಾಗಲಿದೆ ಎಂದು ಅರುಣ್ ಜೇಟ್ಲಿ ಘೋಷಿಸಿದ್ದಾರೆ. ಕೃಷಿ ಮಾರುಕಟ್ಟೆಗಳ ಮೂಲಸೌಕರ್ಯಾಭಿವೃದ್ಧಿಗೆ 2 ಸಾವಿರ ಕೋಟಿ ರೂ. ನೀಡಲಾಗಿದೆ.

ಬೆಳೆದ ಜಾಗಕ್ಕೆ ಮಾರುಕಟ್ಟೆ ತಲುಪಿಸುವುದು, ರೈತರು ಬೆಳೆದ ಉತ್ಪನ್ನಗಳ ಸಂಸ್ಕರಣೆಗೆ ಯೋಜನೆ, ಒದಗಿಸುವುದು, ಆಹಾರ ಸಂಸ್ಕರಣೆಗಾಗಿ ಕೃಷಿ ಸಂಪದ ಯೋಜನೆ, ಆಪರೇಷನ್ ಗ್ರೀನ್ ಹೆಸರಿನಲ್ಲಿ 500 ಕೋಟಿ ರೂ. ನಿಧಿ, ಬೆಂಬಲ ಬೆಲೆ ನೇರವಾಗಿ ರೈತರಿಗೆ ತಲುಪಲು ಯೋಜನೆ, ಮೀನುಗಾರಿಕೆ, ಪಶು ಸಂಗೋಪನೆ ವಲಯದವರಿಗೂ ಕೃಷಿ ಕಾರ್ಡ್ ವಿತರಣೆ, 52 ಮೆಗಾಫುಡ್ ಪಾರ್ಕ್ ಸ್ಥಾಪನೆ ಮುಂತಾದ ಹೊಸ ಕೊಡುಗೆಗಳನ್ನು ಈ ಬಾರಿಯ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಆಡಳಿತಕ್ಕೆ ಶತಕದ ಸಂಭ್ರಮ: ರಾಜ್ಯದ ಅವೃದ್ಧಿಗೆ ಮೂರು ಮಹಾ ಸಂಕಲ್ಪ ಘೋಷಿಸಿದ ಸಿಎಂ ಶಿವಕುಮಾರ್‌

ಗಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿ ಭಾರತಕ್ಕೆ ಚೀನಾ ಅಧ್ಯಕ್ಷ: ಗರಿಗೆದರಿದ ದ್ವಿಪಕ್ಷೀಯ ಮಾತುಕತೆ

iPhone 18 ಲಾಂಚ್ ಆಗುತ್ತಿದ್ದಂತೇ iPhone 17 ಬೆಲೆ ಭಾರೀ ಏರಿಕೆ: ಸೋಷಿಯಲ್ ಮೀಡಿಯಾದಲ್ಲಿ ಫುಲ್ ಹಲ್ ಚಲ್

ಮತ್ತೊಂದು ಕಾನೂನು ಸಂಕಷ್ಟದ ಸುಳಿಯಲ್ಲಿ ನಟ ದರ್ಶನ್‌: ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಸಮನ್ಸ್

ಏಯ್ ಸುಮ್ನಿರಮ್ಮಾ… ದಲಿತ ಯುವತಿ ಪ್ರಶ್ನೆಗೆ ಕೆಂಡಾಮಂಡಲರಾದ ಸಚಿವ ಶಿವಲಿಂಗೇಗೌಡ: Video

ಮುಂದಿನ ಸುದ್ದಿ