Publish Date: Mon, 20 Apr 2020 (09:44 IST)
Updated Date: Mon, 20 Apr 2020 (09:46 IST)
ಕೊಚ್ಚಿ: ಕೇರಳದಲ್ಲಿ ಕೊರೋನಾ ನಿಯಂತ್ರಣವಾಗುತ್ತಿರುವ ಬೆನ್ನಲ್ಲೇ ಲಾಕ್ ಡೌನ್ ಸಡಿಲಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೇಂದ್ರದ ಕೆಂಗಣ್ಣಿಗೆ ಗುರಿಯಾಗಿದೆ.
ಕೇರಳದಲ್ಲಿ ಇಂದಿನಿಂದ ಕೆಲವು ಬಸ್, ದ್ವಿಚಕ್ರ ವಾಹನ, ಹೋಟೆಲ್ ಗಳನ್ನು ಷರತ್ತುಬದ್ಧವಾಗಿ ತೆರೆಯಲು ಅನುಮತಿ ನೀಡಲಾಗಿದೆ. ಇದು ಕೇಂದ್ರ ಗೃಹ ಸಚಿವಾಲಯದ ಕೆಂಗಣ್ಣಿಗೆ ಗುರಿಯಾಗಿದೆ.
ಕೇಂದ್ರ ಮೇ 3 ರವರೆಗೂ ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿತ್ತು. ಆದರೆ ಕೇರಳ ರಾಜ್ಯ ಸರ್ಕಾರ ಏಕಾಂಗಿಯಾಗಿ ಕರ್ಫ್ಯೂ ಸಡಿಲಿಸುವ ನಿರ್ಧಾರ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ.