Webdunia - Bharat's app for daily news and videos

Install App

ದೇಶಿಯ ಕ್ರಿಕೆಟ್‌ನಲ್ಲಿ ಮತ್ತೊಂದು ದಾಖಲೆ ಬರೆದ 13 ವರ್ಷದ ವೈಭವ್ ಸೂರ್ಯವಂಶಿ

Sampriya
ಭಾನುವಾರ, 22 ಡಿಸೆಂಬರ್ 2024 (11:16 IST)
Photo Courtesy X
ಭೋಪಾಲ್‌: ಐಪಿಎಲ್‌ ಮೆಗಾ ಹರಾಜಿನಲ್ಲಿ ₹ 1.10 ಕೋಟಿಗೆ ರಾಜಸ್ಥಾನ ರಾಯಲ್ಸ್‌ ತಂಡಕ್ಕೆ ಬಿಕರಿಯಾಗಿ ಇತಿಹಾಸ ಸೃಷ್ಟಿಸಿದ 13 ವರ್ಷದ ವೈಭವ್ ಸೂರ್ಯವಂಶಿ ಇದೀಗ ಮತ್ತೊಂದು ವಿಶೇಷ ಸಾಧನೆ ಮಾಡಿದ್ದಾರೆ.

ವೈಭವ್‌ ಅವರು ಅತ್ಯಂತ ಕಿರಿಯ ವಯಸ್ಸಿನಲ್ಲೇ ವಿಜಯ್‌ ಹಜಾರೆ ಟ್ರೋಫಿ‌ (ದೇಶೀಯ ಏಕದಿನ ಪಂದ್ಯ) ಪಂದ್ಯವನ್ನಾಡಿದ ವಿಶೇಷ ಸಾಧನೆಗೆ ಪಾತ್ರರಾದರು. 1999-2000 ಇಸವಿಯ ಋತುವಿನಲ್ಲಿ ಅಲಿ ಅಕ್ಬರ್‌ 14 ವರ್ಷ, 51 ದಿನಗಳ ವಯಸ್ಸಿನವರಾಗಿದ್ದಾಗ ವಿದರ್ಭ ಪರವಾಗಿ ಪಂದ್ಯವನ್ನಾಡಿದ್ದರು. ಈ ಮೂಲಕ ವಿಜಯ್‌ ಹಜಾರೆ ಟ್ರೋಫಿಗೆ ಪದಾರ್ಪಣೆ ಮಾಡಿದ್ದ ಅತ್ಯಂತ ಕಿರಿಯ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಈಗ ವೈಭವ್‌ 13 ವರ್ಷ, 269 ದಿನಗಳಿದ್ದಾಗ ದೇಶಿಯ ಕ್ರಿಕೆಟ್‌ ಟ್ರೋಫಿಯನ್ನಾಡಿ ಗಮನ ಸೆಳೆದಿದ್ದಾರೆ.

ಶನಿವಾರ ಬಿಹಾರ ತಂಡದ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಮಧ್ಯಪ್ರದೇಶ ತಂಡದ ಪರ ಆಡಿದ್ದಾರೆ. ವೈಭವ್‌ ಸೂರ್ಯವಂಶಿ ಆರಂಭಿಕನಾಗಿ ಕಣಕ್ಕಿಳಿದು ಕೇವಲ 4 ರನ್‌ ಗಳಿಸಿ ಔಟಾಗಿದ್ದಾರೆ. ಮೊದಲು ಬ್ಯಾಟಿಂಗ್‌ ಮಾಡಿದ್ದ ಬಿಹಾರ ತಂಡ 46.4 ಓವರ್‌ಗಳಲ್ಲಿ 196 ರನ್‌ಗಳಿಗೆ ಆಲೌಟ್‌ ಆಗಿತ್ತು. ಈ ಗುರಿ ಬೆನ್ನಟ್ಟಿದ್ದ ಮಧ್ಯಪ್ರದೇಶ ತಂಡ ಕೇವಲ 25.1 ಓವರ್‌ಗಳಲ್ಲೇ 197 ರನ್‌ ಗಳಿಸಿ ಗೆಲುವು ಸಾಧಿಸಿತು.  

5ನೇ ವಯಸ್ಸಿನಲ್ಲೇ ಕ್ರಿಕೆಟ್ ಅಭ್ಯಾಸ ಶುರು ಮಾಡಿದ್ದ ವೈಭವ್, 12ನೇ ವಯಸ್ಸಿಗೆ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈಗಾಗಲೇ ರಣಜಿ ಟ್ರೋಫಿ, ಹೇಮಂತ್ ಟ್ರೋಫಿ, ಕೂಚ್ ಬಿಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟೂರ್ನಿಗಳಲ್ಲಿ ಆಡಿದ್ದಾರೆ. 13ನೇ ವಯಸ್ಸಿನೊಳಗೆ ಭಾರತ ಅಂಡರ್-19 ತಂಡದಲ್ಲೂ ಕಾಣಿಸಿಕೊಂಡಿದ್ದಾರೆ.

2023 ರಲ್ಲಿ ರಣಜಿ ಟೂರ್ನಿಗೆ ಪದಾರ್ಪಣೆ ಮಾಡಿದ್ದ ಸೂರ್ಯವಂಶಿ, ಆ ಬಳಿಕ ಬಿಹಾರ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ರಣಧೀರ್ ವರ್ಮಾ ಅಂಡರ್ 19 ಏಕದಿನ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ತ್ರಿಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಈಚೆಗೆ ಆಸ್ಟ್ರೇಲಿಯಾದ ಅಂಡರ್-19 ತಂಡದ ವಿರುದ್ಧ 64 ಎಸೆತಗಳಲ್ಲಿ 104 ರನ್ ಸಿಡಿಸಿ ಮಿಂಚಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments