Webdunia - Bharat's app for daily news and videos

Install App

ಕ್ಯಾಚ್ ಕೈ ಬಿಟ್ಟ ತಪ್ಪಿಗೆ ರೋಹಿತ್ ಶರ್ಮಾ ಪ್ರಾಯಶ್ಚಿತ್ತ ಮಾಡಿಕೊಂಡರಾ: ಅಕ್ಸರ್ ಪಟೇಲ್ ಹೇಳಿದ್ದೇನು

Krishnaveni K
ಮಂಗಳವಾರ, 25 ಫೆಬ್ರವರಿ 2025 (16:40 IST)
ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅಕ್ಸರ್ ಪಟೇಲ್ ಗೆ ಹ್ಯಾಟ್ರಿಕ್ ಅವಕಾಶ ಕೈತಪ್ಪಿಸಿದ್ದಕ್ಕೆ ರೋಹಿತ್ ಶರ್ಮಾ ಪ್ರಾಯಶ್ಚಿತ್ತವಾಗಿ ಅವರನ್ನು ಡಿನ್ನರ್ ಗೆ ಕರೆದುಕೊಂಡು ಹೋಗಿದ್ದಾರಾ? ಸ್ವತಃ ಅಕ್ಸರ್ ಪಟೇಲ್ ರಿವೀಲ್ ಮಾಡಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅಕ್ಸರ್ ಪಟೇಲ್ ಗೆ ಹ್ಯಾಟ್ರಿಕ್ ಅವಕಾಶವಿತ್ತು. ಆದರೆ ಮೂರನೇ ಎಸೆತದಲ್ಲಿ ರೋಹಿತ್ ಶರ್ಮಾ ಕೈಗೆ ಸುಲಭವಾಗಿ ಬಂದ ಕ್ಯಾಚ್ ಕೈ ಚೆಲ್ಲಿದ್ದರಿಂದ ಅಕ್ಸರ್ ಗೆ ಐತಿಹಾಸಿಕ ದಾಖಲೆ ಮಾಡುವ ಅವಕಾಶ ಮಿಸ್ ಆಯ್ತು.

ಇದಕ್ಕೆ ಅವರು ಮೈದಾನದಲ್ಲೇ ಕೈ ಮುಗಿದು ಅಕ್ಸರ್ ಕ್ಷಮೆ ಯಾಚಿಸಿದ್ದರು. ಪಂದ್ಯದ ಬಳಿಕ ಮಾತನಾಡಿದ್ದ ರೋಹಿತ್, ನಾನು ತಪ್ಪು ಮಾಡಿಬಿಟ್ಟೆ. ಇದರ ಪ್ರಾಯಶ್ಚಿತ್ತವಾಗಿ ಅವರನ್ನು ಡಿನ್ನರ್ ಗೆ ಕರೆದುಕೊಂಡು ಹೋಗುತ್ತೇನೆ ಎಂದಿದ್ದರು.

ನಿಜವಾಗಿ ರೋಹಿತ್ ಡಿನ್ನರ್ ಗೆ ಕರೆದುಕೊಂಡು ಹೋದರೇ? ಈ ಪ್ರಶ್ನೆಗೆ ಉತ್ತರಿಸಿರುವ ಅಕ್ಸರ್ ಪಟೇಲ್, ಇದುವರೆಗೆ ಕರೆದುಕೊಂಡು ಹೋಗಿಲ್ಲ. ಆದರೆ ನಮಗೆ ಒಂದು ವಾರದ ಬ್ರೇಕ್ ಇದೆ. ಈ ಸಮಯದಲ್ಲಿ ಒಂದು ದಿನವಾದರೂ ನಾನು ಡಿನ್ನರ್ ಗೆ ಕರೆದುಕೊಂಡು ಹೋಗಲು ಕೇಳುತ್ತೇನೆ ಎಂದು ತಮಾಷೆಯಾಗಿ ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments