Webdunia - Bharat's app for daily news and videos

Install App

ಗಾಯಾಳು ಶಮಿ, ರಿಷಬ್ ಪಂತ್, ಪೃಥ್ವಿ ಶಾರನ್ನು ಲಂಡನ್ ಗೆ ರವಾನಿಸಲಿರುವ ಬಿಸಿಸಿಐ

Krishnaveni K
ಬುಧವಾರ, 24 ಜನವರಿ 2024 (09:00 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾದಲ್ಲಿ ಗಾಯಾಳು ಆಟಗಾರರ ಪಟ್ಟಿ ಹನುಮಂತನ ಬಾಲದಂತಿದೆ. ಗಾಯಗೊಂಡ ಪ್ರಮುಖ ಆಟಗಾರರು ಯಾರೂ ಇನ್ನು ಒಂದು ತಿಂಗಳು ಕ್ರಿಕೆಟ್ ಗೆ ಮರಳುವ ಸೂಚನೆಯಿಲ್ಲ.

ಒಂದೆಡೆ ಟಿ20 ವಿಶ್ವಕಪ್ ಹತ್ತಿರವಾಗುತ್ತಿದ್ದು, ಭಾರತದ ಕೀ ಆಟಗಾರರೇ ಗಾಯದಿಂದಾಗಿ ಒಬ್ಬೊಬ್ಬರಾಗಿ ಹೊರಗುಳಿಯುತ್ತಿದ್ದಾರೆ. ಈಗಾಗಲೇ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಚೇತರಿಕೆ ಕಾಣದೇ ಐಪಿಎಲ್ ಗೂ ಅನುಮಾನ ಎನ್ನುವ ಪರಿಸ್ಥಿತಿಯಲ್ಲಿದ್ದಾರೆ.

ಏಕದಿನ ವಿಶ್ವಕಪ್ ಹೀರೋ ಮೊಹಮ್ಮದ್ ಶಮಿ ಕೂಡಾ ವಿಶ್ವಕಪ್ ಬಳಿಕ ಗಾಯದಿಂದಾಗಿ ಒಂದೇ ಒಂದು ಪಂದ್ಯವಾಡಿಲ್ಲ. ಪಾದದ ನೋವಿಗೊಳಗಾಗಿರುವ ಶಮಿ ಇಷ್ಟು ದಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಆದರೂ ಅವರ ಫಿಟ್ನೆಸ್ ಬಗ್ಗೆ ಎನ್ ಸಿಎ ತಜ್ಞರಿಗೆ ತೃಪ್ತಿಯಾಗಿಲ್ಲ. ಹೀಗಾಗಿ ಶಮಿಯನ್ನು ಹೆಚ್ಚಿನ ಪರೀಕ್ಷೆಗೆ ಲಂಡನ್ ಗೆ ರವಾನಿಸಲು ತೀರ್ಮಾನಿಸಲಾಗಿದೆ.

ಶಮಿ ಜೊತೆಗೆ ರಸ್ತೆ ಅಪಘಾತದಿಂದಾಗಿ ಕಳೆದ ಒಂದು ವರ್ಷದಿಂದ ಕ್ರಿಕೆಟ್ ನಿಂದ ದೂರವಿರುವ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್, ಗಾಯಗೊಂಡಿರುವ ಪೃಥ್ವಿ ಶಾ ಅವರನ್ನೂ ಲಂಡನ್ ಗೆ ಹೆಚ್ಚಿನ ವೈದ್ಯಕೀಯ ತಪಾಸಣೆಗಾಗಿ ಕಳುಹಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಮುಂಬರುವ ವಿಶ್ವಕಪ್ ವೇಳೆಗೆ ಈ ಎಲ್ಲಾ ಆಟಗಾರರೂ ಫಿಟ್ ಆಗಿರುವುದು ಮುಖ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments