Webdunia - Bharat's app for daily news and videos

Install App

ಹಿಟ್‌ಮ್ಯಾನ್‌ ರೋಹಿತ್ ಶರ್ಮಾ ವಿದಾಯದ ಬೆನ್ನಲ್ಲೇ ಟೆಸ್ಟ್‌ ನಾಯಕತ್ವಕ್ಕೆ ಬೂಮ್ರಾ ಮತ್ತು ಗಿಲ್ ಮಧ್ಯೆ ಪೈಪೋಟಿ

Sampriya
ಗುರುವಾರ, 8 ಮೇ 2025 (14:32 IST)
Photo Courtesy X
ಮುಂಬೈ: ಹಿಟ್‌ಮ್ಯಾಟ್‌ ರೋಹಿತ್ ಶರ್ಮಾ ಅವರು ಬುಧವಾರ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಅವರು ಭಾರತ ಟೆಸ್ಟ್‌ ತಂಡದ ನಾಯಕ ಕೂಡ ಆಗಿದ್ದರಿಂದ ಅವರಿಂದ ತೆರವಾದ ಸ್ಥಾನಕ್ಕೆ ಯಾರು ತುಂಬುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಸದ್ಯ ತಂಡದ ನಾಯಕತ್ವಕ್ಕಾಗಿ ವೇಗದ ಬೌಲರ್‌ ಜಸ್‌ಪ್ರೀತ್‌ ಬೂಮ್ರಾ ಮತ್ತು ಯುವ ಆಟಗಾರ ಶುಭಮನ್ ಗಿಲ್‌ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಬೂಮ್ರಾ, ಗಿಲ್ ಜೊತೆಗೆ, ಕನ್ನಡಿಗ ಕೆ.ಎಲ್. ರಾಹುಲ್ ಮತ್ತು ರಿಷಭ್ ಪಂತ್ ಅವರ ಹೆಸರುಗಳೂ ಕೇಳಿ ಬರುತ್ತಿವೆ.

ದೀರ್ಘ ಸಮಯದಿಂದ ಲಯದಲ್ಲಿ ವಿಫಲರಾಗುತ್ತಿದ್ದ 38 ವರ್ಷದ ರೋಹಿತ್‌  ಟೆಸ್ಸ್‌ ಮಾದರಿಗೆ ದಿಢೀರ್‌ ವಿದಾಯ ಹೇಳಿದ್ದಾರೆ. 2024-25ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ಕೇವಲ 1 ಪಂದ್ಯ ಗೆದ್ದಿತ್ತು. ಉಳಿದ ನಾಲ್ಕರಲ್ಲಿ ಒಂದು ಡ್ರಾ ಆದರೆ, ಉಳಿದ ಮೂರರಲ್ಲಿ ಸೋಲು ಎದುರಾಗಿತ್ತು. ಗೆದ್ದ ಒಂದು ಪಂದ್ಯದಲ್ಲಿ ತಂಡ ಮುನ್ನಡೆಸಿದ್ದು ಬೂಮ್ರಾ ಎಂಬುದು ವಿಶೇಷ. ಇದೇ ಕಾರಣಕ್ಕೆ ಬೂಮ್ರಾ ಹೆಸರು ಮುಂಚೂಣಿಯಲ್ಲಿದೆ.

ಆದರೆ, ಗಾಯದ ಸಮಸ್ಯೆಯ ಕಾರಣಕ್ಕೆ ಅವರು ದೀರ್ಘ ಸಮಯದವರೆಗೆ ನಾಯಕರಾಗಿ ಮುಂದುವರಿಯುವುದು ಅನುಮಾನ. ಅದೇ ಕಾರಣಕ್ಕೆ ಅವರಿಗೆ ಅವಕಾಶ ಕೈತಪ್ಪಬಹುದು ಎನ್ನಲಾಗುತ್ತಿದೆ.

ಭಾರತ ತಂಡವು ಜೂನ್‌- ಜುಲೈನಲ್ಲಿ ಇಂಗ್ಲೆಂಡ್‌ ಪ್ರವಾಸ ಕೈಗೊಳ್ಳಲಿದ್ದು, ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಆಡಲಿದೆ. ಆ ವೇಳೆ, ಬೂಮ್ರಾ ತಂಡ ಮುನ್ನಡೆಸಬೇಕು. ಶುಭಮನ್‌ ಗಿಲ್‌ ಉಪನಾಯಕರಾಗಿರಲಿ ಎಂದು ಮಾಜಿ ನಾಯಕ ಅನಿಲ್‌ ಕುಂಬ್ಳೆ ಹೇಳಿದ್ದಾರೆ. ಈ ಸರಣಿಯೊಂದಿಗೆ ಭಾರತ ತಂಡ ಟೆಸ್ಟ್ ಚಾಂಪಿಯನ್‌ಷಿಪ್‌ನ ನೂತನ ಆವೃತ್ತಿಯ ಅಭಿಯಾನ ಆರಂಭಿಸಲಿದೆ.

ಕಾರ್ಯಭಾರ ನಿರ್ವಹಣೆ ದೃಷ್ಟಿಯಿಂದ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ), ಶುಭಮನ್‌ ಗಿಲ್‌ ಅವರತ್ತ ಮುಖ ಮಾಡುವ ಸಾಧ್ಯತೆ ಇದೆ. ಅವರು, ಐಪಿಎಲ್‌ನಲ್ಲಿ ಗುಜರಾತ್‌ ಟೈಟನ್ಸ್ ತಂಡ ಮುನ್ನಡೆಸುತ್ತಿದ್ದಾರೆ. ‌

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments