Webdunia - Bharat's app for daily news and videos

Install App

ಗೆಲ್ಲುವ ತಾಕತ್ತು ಬರಲ್ಲ: ಸೋತ ಆರ್ ಸಿಬಿಗೆ ಹಂಗಿಸಿದ ಸಿಎಸ್ ಕೆ ಮಾಜಿ ಆಟಗಾರ ಅಂಬಟಿ ರಾಯುಡು

Krishnaveni K
ಗುರುವಾರ, 23 ಮೇ 2024 (10:57 IST)
Photo Courtesy: Twitter
ಅಹಮ್ಮದಾಬಾದ್: ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ ಸಿಬಿ ಸೋತ ಬೆನ್ನಲ್ಲೇ ಸಿಎಸ್ ಕೆ ಮಾಜಿ ಆಟಗಾರ ಅಂಬಟಿ ರಾಯುಡು ಬೆಂಗಳೂರು ತಂಡವನ್ನು ಹಂಗಿಸಿದ್ದಾರೆ.

ಕೊನೆಯ ಲೀಗ್ ಪಂದ್ಯದಲ್ಲಿ ಸಿಎಸ್ ಕೆ ತಂಡವನ್ನು ಸೋಲಿಸಿ ಆರ್ ಸಿಬಿ ಪ್ಲೇ ಆಫ್ ಗೇರಿತ್ತು. ಈ ಗೆಲುವಿನ ಬಳಿಕ ಆರ್ ಸಿಬಿ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು. ಆದರೆ ಸಿಎಸ್ ಕೆ ಅಭಿಮಾನಿಗಳಿಗೆ ಆರ್ ಸಿಬಿ ಅಭಿಮಾನಿಗಳ ಸಂಭ್ರಮ ಕಿರಿ ಕಿರಿಯಾಗಿತ್ತು. ಧೋನಿಗೆ ಕೈಕುಲುಕುವ ಸೌಜನ್ಯವೂ ತೋರಲಿಲ್ಲ ಎಂದು ಆರ್ ಸಿಬಿ ಮೇಲೆ ಅಭಿಮಾನಿಗಳು ಸಿಟ್ಟಾಗಿದ್ದರು.

ಆರ್ ಸಿಬಿ ವಿರುದ್ಧ ಸಿಎಸ್ ಕೆ ಸೋಲುತ್ತಿದ್ದಂತೇ ಕಾಮೆಂಟರಿ ಮಾಡುತ್ತಿದ್ದ ಅಂಬಟಿ ರಾಯುಡು ಬೇಸರದಿಂದ ಕುಸಿದು ಕುಳಿತಿದ್ದರು. ಪ್ಲೇ ಆಫ್ ಪಂದ್ಯಕ್ಕೆ ಮುನ್ನ ಸಿಎಸ್ ಕೆ ಮಾಜಿ ಆಟಗಾರ ಅಂಟಿ ರಾಯುಡು ಈ ಪಂದ್ಯವನ್ನು ಆರ್ ಸಿಬಿ ಗೆಲ್ಲಲ್ಲ ಎಂದಿದ್ದರು.

ಇದೀಗ ರಾಜಸ್ಥಾನ್ ವಿರುದ್ಧ ಸೋತ ಬೆನ್ನಲ್ಲೇ ಅವರು ಆರ್ ಸಿಬಿಯನ್ನು ಹಂಗಿಸಿದ್ದಾರೆ. ಸಿಎಸ್ ಕೆಯನ್ನು ಸೋಲಿಸಿದ ಮಾತ್ರಕ್ಕೆ ಐಪಿಎಲ್ ಗೆದ್ದಂತಾಗುವುದಿಲ್ಲ. ಪ್ಲೇ ಆಫ್ ನಲ್ಲಿ ಚೆನ್ನಾಗಿ ಆಡಿ ಗೆಲ್ಲಬೇಕು. ಐಪಿಎಲ್ ಟ್ರೋಫಿ ಗೆದ್ದವರು ಯಾರೂ ಸಂಭ್ರಮಾಚರಣೆ, ಆಕ್ರಮಣಕಾರೀ ವರ್ತನೆಯಿಂದ ಗೆದ್ದಿಲ್ಲ. ಪ್ಲೇ ಆಫ್ ನಲ್ಲಿ ಗೆಲ್ಲುವುದು ಅಷ್ಟು ಸುಲಭವಲ್ಲ ಎಂದು ಆರ್ ಸಿಬಿಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments