Webdunia - Bharat's app for daily news and videos

Install App

ನಿಷೇಧ ಶಿಕ್ಷೆ ವಿರುದ್ಧ ತಿರುಗಿಬಿದ್ದ ಶ್ರೀಲಂಕಾ ಕ್ರಿಕೆಟಿಗ ದಿನೇಶ್ ಚಂಡಿಮಾಲ್

Webdunia
ಶುಕ್ರವಾರ, 22 ಜೂನ್ 2018 (09:06 IST)
ಕೊಲೊಂಬೊ: ಚೆಂಡು ವಿರೂಪ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಒಂದು ಟೆಸ್ಟ್ ಪಂದ್ಯದ ನಿಷೇಧ ಶಿಕ್ಷೆಗೊಳಗಾದ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ದಿನೇಶ್ ಚಂಡಿಮಾಲ್ ಐಸಿಸಿಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸಿಹಿ ಪದಾರ್ಥ ಬಳಸಿ ಚಂಡಿಮಾಲ್ ಬಾಲ್ ವಿರೂಪಗೊಳಿಸಿದ್ದು, ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಇದನ್ನು ವಿಚಾರಣೆ ನಡೆಸಿದ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ನೇತೃತ್ವದ ಸಮಿತಿಯ ವರದಿ ಆಧರಿಸಿ ಐಸಿಸಿ ಒಂದು ಪಂದ್ಯದ ನಿಷೇಧ ಮತ್ತು ಒಂದು ಪಂದ್ಯದ ಸಂಭಾವನೆಯನ್ನು ದಂಡದ ರೂಪದಲ್ಲಿ ವಿಧಿಸಿತ್ತು.

ಆದರೆ ಆರಂಭದಿಂದಲೂ ತಾನು ತಪ್ಪು ಮಾಡಿಲ್ಲವೆಂದೇ ವಾದಿಸುತ್ತಿರುವ ಚಂಡಿಮಾಲ್ ಶಿಕ್ಷೆಯ ವಿರುದ್ಧ ಐಸಿಸಿಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ ತಂಡದ ಆಟಗಾರರ ಜತೆ ಈ ಬಗ್ಗೆ ಚರ್ಚೆ ನಡೆಸಿತ್ತು. ಇದಾದ ಬಳಿಕ ಇದೀಗ ಚಂಡಿಮಾಲ್ ಮೇಲ್ಮನವಿ ನಿರ್ಧರಿಸಿದ್ದಾರೆ. ವಿಚಾರಣೆ ಸರಿಯಾಗಿ ನಡೆದಿಲ್ಲ ಎನ್ನುವುದು ಅವರ ವಾದವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments