Webdunia - Bharat's app for daily news and videos

Install App

Duleep Trophy: ತಿಣುಕಾಡಿದರೂ ತಂಡಕ್ಕೆ ಆಸರೆಯಾದ ಕೆಎಲ್ ರಾಹುಲ್

Krishnaveni K
ಶನಿವಾರ, 7 ಸೆಪ್ಟಂಬರ್ 2024 (12:58 IST)
Photo Credit: X
ಬೆಂಗಳೂರು: ತವರು ಚಿನ್ನಸ್ವಾಮಿ ಅಂಗಣದಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ತಿಣುಕಾಡಿ 37 ರನ್ ಗಳಿಸಿದರೂ ತಂಡಕ್ಕೆ ಆಸರೆಯಾದರು.

ಭಾರತ ಬಿ ತಂಡದ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಎ ತಂಡದ ಪರವಾಗಿ ಕಣಕ್ಕಿಳಿದಿರುವ ಕೆಎಲ್ ರಾಹುಲ್ ತಂಡ ಸಂಕಷ್ಟದಲ್ಲಿದ್ದಾಗ ತಾಳ್ಮೆಯ ಆಟವಾಡಿದರು. ಆದರೆ ಒಟ್ಟು 111 ಎಸೆತ ಎದುರಿಸಿದ ಅವರು 37 ರನ್ ಗಳಿಸಿ ಔಟಾಗಿ ನಿರಾಸೆ ಅನುಭವಿಸಿದರು.

ತವರಿನಲ್ಲಿ ನಡೆಯುತ್ತಿರುವ ಪಂದ್ಯವೆಂಬ ಕಾರಣಕ್ಕೆ ಕೆಎಲ್ ರಾಹುಲ್ ಗೆ ಚಿಯರ್ ಮಾಡಲು ಅವರ ಅಭಿಮಾನಿಗಳು ಮೈದಾನಕ್ಕೆ ಬಂದಿದ್ದರು. ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ನಿಟ್ಟಿನಲ್ಲಿ ಕೆಎಲ್ ರಾಹುಲ್ ಗೆ ಈ ಪಂದ್ಯ ಮುಖ್ಯವಾಗಿದೆ. ಮುಂಬರುವ ಟೆಸ್ಟ್ ಸರಣಿಗೆ ಆಯ್ಕೆಯಾಗಲು ಇದೇ ದುಲೀಪ್ ಟ್ರೋಫಿ ಮಾನದಂಡವಾಗಲಿದೆ.

ಆದರೆ ತಿಣುಕಾಡಿ 37 ರನ್ ಗಳಿಸಿದ ಅವರು ವಾಷಿಂಘ್ಟನ್ ಸುಂದರ್ ಎಸೆತದಲ್ಲಿ ಸ್ವೀಪ್ ಮಾಡಲು ಹೋಗಿ ಬೌಲ್ಡ್ ಔಟ್ ಆದರು. ಭಾರತ ಬಿ ತಂಡ ಮೊದಲ ಇನಿಂಗ್ಸ್ ನಲ್ಲಿ 321 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೊತ್ತ ಬೆನ್ನತ್ತಿರುವ ಭಾರತ ಎ ತಂಡ ಇತ್ತೀಚೆಗಿನ ವರದಿ ಬಂದಾಗ 7 ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿ ಮುನ್ನಡೆ ಪಡೆಯಲು ಹೆಣಗಾಡುತ್ತಿದೆ. ಭಾರತ ಎ ತಂಡಕ್ಕೆ ಶುಬ್ಮನ್ ಗಿಲ್ ನಾಯಕರಾಗಿದ್ದರೆ ಕನ್ನಡಿಗ ಮಯಾಂಕ್ ಅಗರ್ವಾಲ್, ಧ್ರುವ್ ಜ್ಯುರೆಲ್, ರಿಯಾನ್ ಪರಾಗ್, ಶಿವಂ ದುಬೆ, ಕುಲದೀಪ್ ಯಾದವ್ ಮೊದಲಾದ ಆಟಗಾರರು ಆಡುತ್ತಿದ್ದಾರೆ. ಬಿ ತಂಡದ ಪರ ಅಭಿಮನ್ಯು ಈಶ್ವರನ್ ನಾಯಕರಾಗಿದ್ದರೆ ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ಸರ್ಫರಾಜ್ ಖಾನ್ ಮೊದಲಾದ ಆಟಗಾರರು ಆಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments