Webdunia - Bharat's app for daily news and videos

Install App

ಮೊದಲ ಪರೀಕ್ಷೆಯಲ್ಲೇ ಪಾಸಾದ ಗಂಭೀರ್, ಸೂರ್ಯ ಕುಮಾರ್

Sampriya
ಬುಧವಾರ, 31 ಜುಲೈ 2024 (10:16 IST)
Photo Courtesy X
ಪಲೆಕೆಲೆ: ಭಾರತ ಕ್ರಿಕೆಟ್ ತಂಡ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮತ್ತು ಪೂರ್ಣಾವಧಿ ನಾಯಕ ರಾಗಿ ಸೂರ್ಯಕುಮಾರ್ ಯಾದವ್ ಅವರು ಆಡಿದ ಮೊದಲ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ಚೊಚ್ಚಲ ಸವಾಲನ್ನು ಗೆದ್ದಿದ್ದಾರೆ.

ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡ  ಫೀಲ್ಡಿಂಗ್ ಆಯ್ಕೆ ಮಾಡಿ, ಭಾರತ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಭಾರತ ತಂಡವು ಶ್ರೀಲಂಕಾ ಎದುರಿನ ಸರಣಿಯ ಕೊನೆಯ ಟಿ20 ಪಂದ್ಯದಲ್ಲಿ ಸೂಪರ್ ಓವರ್‌ನಲ್ಲಿ ಜಯ ಸಾಧಿಸಿತು. ಇದರೊಂದಿಗೆ ಸರಣಿಯನ್ನು 3-0ಯಿಂದ ಕೈವಶ ಮಾಡಿಕೊಂಡಿತು.


ಭಾರತ ತಂಡವನ್ನು  20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 137 ರನ್‌ಗಳ ಸಾಧಾರಣ ಮೊತ್ತಕ್ಕೆ ಲಂಕಾ ಬೌಲರ್‌ಗಳು ಕಟ್ಟಿಹಾಕಿದರು. ಗುರಿ ಬೆನ್ನಟ್ಟಿದ ಲಂಕಾ ತಂಡವು ಉತ್ತಮ ಆರಂಭ ಪಡೆದಿತ್ತು. ಆದರೆ ಕೊನೆಯ ಹಂತದಲ್ಲಿ ನಾಟಕೀಯ ಕುಸಿತ ಕಂಡಿತು. ಹೀಗಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 137ರನ್ ಗಳಿಸಿ ಪಂದ್ಯ ಸಮಬಲ ಗೊಂಡಿತು.

ನಂತರ  ನಡೆದ ಸೂಪರ್‌ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ತಂಡವು ಒಂದು ಓವರ್‌ನಲ್ಲಿ 2 ರನ್ ಗಳಿಸಿತು. ಇದಕ್ಕುತ್ತರವಾಗಿ ಸೂರ್ಯಕುಮಾರ್ ಯಾದವ್ ಒಂದು ಬೌಂಡರಿ ಹೊಡೆದು ಜಯಭೇರಿ ಬಾರಿಸಿದರು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments