Webdunia - Bharat's app for daily news and videos

Install App

ಆರ್‌ಸಿಬಿಗೆ ಆನೆಬಲ ತಂದ ಗ್ಯಾರಿ ಮತ್ತು ನೆಹ್ರಾ

ramkrishna puranik
ಗುರುವಾರ, 4 ಜನವರಿ 2018 (16:43 IST)
ಭಾರತ ತಂಡದ ಮಾಜಿ ಕೋಚ್ ಹಾಗೂ 2011 ರ ವಿಶ್ವಕಪ್ ಗೆಲ್ಲುವುದಕ್ಕಾಗಿ ಭಾರತ ತಂಡಕ್ಕೆ ತರಬೇತಿ ನೀಡಿದ್ದ ಗ್ಯಾರಿ ಕರ್ಸ್ಟನ್ ಮತ್ತು ಇತ್ತೀಚೆಗೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಆಶಿಶ್ ನೆಹ್ರಾ ಇಬ್ಬರೂ ಆರ್‌ಸಿಬಿ ತಂಡಕ್ಕೆ ಕೋಚಿಂಗ್ ಪಾಳೆಯದಲ್ಲಿ ಸೇರಿಕೊಂಡಿದ್ದಾರೆ.
ವಿಶ್ವ ಶ್ರೀಮಂತ ಟಿ20 ಕ್ರಿಕೆಟ್ ಪಂದ್ಯಾವಳಿಯಾದ ಐಪಿಎಲ್ 2018 ರ ಆವೃತ್ತಿಯಲ್ಲಿ ಗ್ಯಾರಿ ಕರ್ಸ್ಟನ್ ಮತ್ತು ಆಶಿಶ್ ನೆಹ್ರಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚಿಂಗ್ ತಂಡವನ್ನು ಸೇರ್ಪಡೆಗೊಂಡಿದ್ದಾರೆ. ತಂಡದ ಬ್ಯಾಟಿಂಗ್ ಸಾಮರ್ಥ್ಯವನ್ನು ಹೆಚ್ಚಿಸುವ ಜವಾಬ್ದಾರಿ ಕರ್ಸ್ಟನ್ ಮೇಲಿದ್ದರೆ, ನೆಹ್ರಾ ಬೌಲಿಂಗ್ ಕೋಚ್ ಆಗಿ ನೆರವಾಗಲಿದ್ದಾರೆ. ಇದರೊಂದಿಗೆ 2014 ರಿಂದ ಇಲ್ಲಿಯವರೆಗೆ ತಂಡದ ಮುಖ್ಯ ಕೋಚ್ ಆಗಿದ್ದ ನ್ಯೂಜಿಲೆಂಡ್‌ನ ಮಾಜಿ ಸ್ಪಿನ್ ಬೌಲಿಂಗ್ ಮಾಂತ್ರಿಕ ಡೇನಿಯಲ್ ವೆಟ್ಟೋರಿ ಅವರು ಮುಖ್ಯ ಕೋಚ್ ಆಗಿಯೇ ಮುಂದುವರಿಯಲಿದ್ದಾರೆ.
 
ಐಪಿಎಲ್ 11 ನೇಯ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಈ ಮೂವರು ತಂಡದ ಕೋಚಿಂಗ್ ಪಾಳೆಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗ್ಯಾರಿ ಕರ್ಸ್ಟನ್ ಈ ಮೊದಲು 2015 ರಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಕೋಚ್ ಆಗಿದ್ದರು. ಅವರು ಕಳೆದ ವಾರ ಆರ್‌ಸಿಬಿ ಜೊತೆಗೆ ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
 
ಭಾರತ ತಂಡ 2011 ರ ವಿಶ್ವಕಪ್ ಗೆಲ್ಲಲು ಕೋಚ್ ಆಗಿ ಗ್ಯಾರಿ ಕರ್ಸ್ಟನ್ ಅವರ ಕೊಡುಗೆಯನ್ನು ಇಲ್ಲಿ ನೆನೆಯಬಹುದು. ಐಪಿಎಲ್‌ನಲ್ಲಿ ಚೋಕರ್ಸ್ ಪಟ್ಟವನ್ನು ಪಡುಕೊಂಡಿರುವ ಆರ್‌ಸಿಬಿ, ಈ ಪಟ್ಟದಿಂದ ಮುಕ್ತಿ ಹೊಂದಲು ಈ ಮೂವರ ಜೋಡಿ ಮೋಡಿ ಮಾಡುವುದಾ ಎಂದು ಕಾದು ನೋಡಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

ಮುಂದಿನ ಸುದ್ದಿ
Show comments