Webdunia - Bharat's app for daily news and videos

Install App

ಮತ್ತೊಬ್ಬ ಪಕ್ಕಾ ಬ್ಯಾಟಿಗನನ್ನು ಬೌಲರ್ ಆಗಿ ತಯಾರು ಮಾಡ್ತಿದ್ದಾರೆ ಗೌತಮ್ ಗಂಭೀರ್

Krishnaveni K
ಗುರುವಾರ, 1 ಆಗಸ್ಟ್ 2024 (16:23 IST)
Photo Credit: X
ಕೊಲಂಬೊ: ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಪಕ್ಕಾ ಬ್ಯಾಟಿಗರಾಗಿದ್ದ ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್ ಬೌಲಿಂಗ್ ನಲ್ಲಿ ಮಿಂಚಿ ಎಲ್ಲರೂ ಅಚ್ಚರಿಗೊಳಗಾಗುವಂತೆ ಮಾಡಿದ್ದರು. ಇದೆಲ್ಲದರ ಹಿಂದೆ ನೂತನ ಕೋಚ್ ಗೌತಮ್ ಗಂಭೀರ್ ಮಾಸ್ಟರ್ ಮೈಂಡ್ ಇದೆ ಎನ್ನಲಾಗಿದೆ.

ಐಪಿಎಲ್ ನಲ್ಲೂ ಪಕ್ಕಾ ಬೌಲರ್ ಆಗಿದ್ದ ಸುನಿಲ್ ನರೈನ್ ನನ್ನು ಆರಂಭಿಕ ಬ್ಯಾಟಿಗನಾಗಿ ಯಶಸ್ಸು ಕಾಣುವಂತೆ ಮಾಡಿದ್ದರಲ್ಲಿ ಗಂಭೀರ್ ಶ್ರಮವಿದೆ. ಇಂತಹ ಅನೇಕ ಅಚ್ಚರಿಯ ನಿರ್ಧಾರಗಳನ್ನು ಗಂಭೀರ್ ತೆಗೆದುಕೊಳ್ಳುತ್ತಾರೆ. ಈಗ ಟೀಂ ಇಂಡಿಯಾದಲ್ಲೂ ಇಂತಹ ಪ್ರಯೋಗ ಮಾಡುತ್ತಿದ್ದಾರೆ.

ಕೊನೆಯ ಟಿ20 ಪಂದ್ಯದಲ್ಲಿ ಕೊನೆಯ ಎರಡು ಓವರ್ ನಲ್ಲಿ ಬ್ಯಾಟಿಗರಾದ ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್ ಬೌಲಿಂಗ್ ಗಿಳಿದಾಗ ಎಲ್ಲರೂ ಅಚ್ಚರಿಗೊಳಗಾಗಿದ್ದರು. ವಿಶೇಷವೆಂದರೆ ಇವರಿಬ್ಬರ ಬೌಲಿಂಗ್ ಕೈಚಳಕದಿಂದಾಗಿಯೇ ಭಾರತ ಸೂಪರ್ ಓವರ್ ವರೆಗೂ ಬಂದು ಪಂದ್ಯ ಗೆಲ್ಲುವಂತಾಗಿತ್ತು.

ಇದೀಗ ಏಕದಿನ ಸರಣಿಯಲ್ಲೂ ಗಂಭೀರ್ ಇಂತಹದ್ದೇ ಪ್ರಯೋಗ ಮುಂದುವರಿಸುವ ಸೂಚನೆ ನೀಡಿದ್ದಾರೆ. ಶ್ರೇಯಸ್ ಅಯ್ಯರ್ ಇಂದು ನೆಟ್ ಅಭ್ಯಾಸದ ವೇಳೆ ಬೌಲಿಂಗ್ ನಡೆಸುತ್ತಿದ್ದರು. ಇದನ್ನು ನೋಡಿದರೆ ಮುಂದಿನ ದಿನಗಳಲ್ಲಿ ಶ್ರೇಯಸ್ ರನ್ನು ಕೇವಲ ಬ್ಯಾಟಿಗರಾಗಿ ಮಾತ್ರವಲ್ಲ, ಬೌಲಿಂಗ್ ಮಾಡುವುದನ್ನೂ ನೋಡಬಹುದು. ತಂಡದ ಎಲ್ಲಾ ಆಟಗಾರರೂ ತಂಡದ ಅಗತ್ಯಕ್ಕೆ ತಕ್ಕಂತೆ ಎಲ್ಲಾ ರೋಲ್ ಮಾಡಲು ಸಿದ್ಧರವಿರಬೇಕು ಎಂಬುದು ಗಂಭೀರ್ ಪಾಲಿಸಿ. ಇದೇ ಕಾರಣಕ್ಕೆ ಈಗ ಶ್ರೇಯಸ್ ಅಯ್ಯರ್ ರಿಂದ ಬೌಲಿಂಗ್ ಅಭ್ಯಾಸ ನಡೆಸಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಗಂಭೀರ್ ಯುಗದಲ್ಲಿ ಎಲ್ಲವೂ ಸಾಧ್ಯ ಎಂದು ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments