Webdunia - Bharat's app for daily news and videos

Install App

ಐಪಿಎಲ್ ಗಾಗಿ ಗಾಯ ಮುಚ್ಚಿಟ್ಟು ಆಡುತ್ತಿದ್ದಾರಾ ಹಾರ್ದಿಕ್ ಪಾಂಡ್ಯ

Krishnaveni K
ಶನಿವಾರ, 13 ಏಪ್ರಿಲ್ 2024 (12:14 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರು ಐಪಿಎಲ್ ಗಾಗಿ ಏನು ತ್ಯಾಗ ಮಾಡಲೂ ಮುಂದಾಗುತ್ತಾರೆ ಎಂಬ ಅಪವಾದಗಳಿವೆ. ಅದನ್ನೀಗ ಹಾರ್ದಿಕ್ ಪಾಂಡ್ಯ ನಿಜ ಮಾಡುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.

ಏಕದಿನ ವಿಶ್ವಕಪ್ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಬಳಿಕ ಐಪಿಎಲ್ ವೇಳೆಗೆ ಫಿಟ್ ಆಗಿ ತಂಡಕ್ಕೆ ಮರಳಿದ್ದರು. ಆದರೆ ಐಪಿಎಲ್ ನಲ್ಲಿ ಅವರು ಆಡುತ್ತಿರುವ ರೀತಿ ನೋಡಿದರೆ ನಿಜವಾಗಿಯೂ ಅವರು ಸಂಪೂರ್ಣ ಫಿಟ್ ಆಗಿದ್ದಾರೆಯೇ ಅಥವಾ ಗಾಯವಿದ್ದರೂ ಮರೆ ಮಾಚುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಕಳೆದ ಮೂರು ಪಂದ್ಯಗಳಲ್ಲಿ ಪಾಂಡ್ಯ ಎಸೆದಿದ್ದು ಕೇವಲ ಒಂದು ಓವರ್. ಇದನ್ನು ನೋಡಿದರೆ ಅವರು ಬೌಲಿಂಗ್ ಮಾಡುವಷ್ಟು ಸಂಪೂರ್ಣ ಫಿಟ್ ಆಗಿಲ್ಲ ಎಂಬ ಅನುಮಾನ ಮೂಡಿದೆ. ಈ ಮೊದಲು ಬೆನ್ನು ನೋವಿಗೊಳಗಾಗಿದ್ದಲೂ ಹಾರ್ದಿಕ್ ತುಂಬಾ ಸಮಯ ಬೌಲಿಂಗ್ ಮಾಡಿರಲಿಲ್ಲ. ಈಗ ಮತ್ತೆ ಅವರ ವರ್ತನೆ ಅದೇ ಅನುಮಾನ ಮೂಡಿಸಿದೆ.

ಒಂದು ವೇಳೆ ಹಾರ್ದಿಕ್ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡನ್ನೂ ಮಾಡುವಷ್ಟು ಫಿಟ್ ಆಗದೇ ಇದ್ದಲ್ಲಿ ಅವರು ಟಿ20 ವಿಶ್ವಕಪ್ ತಂಡದಲ್ಲಿ ಆಯ್ಕೆಯಾಗಲ್ಲ. ಸದ್ಯಕ್ಕೆ ಅವರ ಸ್ಥಾನ ತುಂಬಬಲ್ಲ ಯುವ ಆಟಗಾರರು ಟೀಂ ಇಂಡಿಯಾಗೆ ಸಿಕ್ಕಿದ್ದಾರೆ. ಒಂದು ವೇಳೆ ಟಿ20 ವಿಶ್ವಕಪ್ ಗೆ ಆಯ್ಕೆಯಾಗಬೇಕಿದ್ದರೆ ಅವರು ಐಪಿಎಲ್ ನಿಂದ ಹೊರಗುಳಿಯಬಹುದಿತ್ತು. ಆದರೆ ಐಪಿಎಲ್ ನಲ್ಲಿ ಬೌಲಿಂಗ್ ಮಾಡದೇ ಬ್ಯಾಟಿಂಗ್ ಮಾತ್ರ ಮಾಡುತ್ತಿರುವುದು ನೋಡಿದರೆ ಅವರ ಫಿಟ್ನೆಸ್ ಬಗ್ಗೆಯೇ ಅನುಮಾನ ಮೂಡುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments