Webdunia - Bharat's app for daily news and videos

Install App

ರಣಜಿಯಲ್ಲೂ ರನ್‌ಗೆ ಹೆಣಗಾಡಿದ ಹಿಟ್‌ಮ್ಯಾನ್‌: ಮತ್ತೆ ನಿರಾಸೆ ಮೂಡಿಸಿದ ರೋಹಿತ್‌ ಶರ್ಮಾ

Sampriya
ಗುರುವಾರ, 23 ಜನವರಿ 2025 (12:41 IST)
Photo Courtesy X
ಮುಂಬೈ: ರಣಜಿ ಆರನೇ ಸುತ್ತಿನ ಪಂದ್ಯಾವಳಿಗಳು ಇಂದಿನಿಂದ ಆರಂಭವಾಗಿವೆ. ಎ ಗುಂಪಿನ ಪಂದ್ಯದಲಿಂದು ಮುಂಬೈ ಮತ್ತು ಜಮ್ಮು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಮುಂಬೈ ಪರ ಆರಂಭಿಕ ಬ್ಯಾಟರ್​ ಆಗಿ ಕಣಕ್ಕಿಳಿದಿರುವ ಹಿಟ್‌ಮ್ಯಾನ್‌ ರೋಹಿತ್​ ಶರ್ಮಾ ನಿರಾಸೆ ಮೂಡಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಬಾರ್ಡರ್​ ಗಾವಸ್ಕರ್​ ಟ್ರೋಫಿಯ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ತಂಡದ ನಾಯಕನಾಗಿದ್ದ ರೋಹಿತ್​ ಶರ್ಮಾ ಕಳಪೆ ಪ್ರದರ್ಶನ ತೋರಿದ್ದರು. ಮೂರು ಪಂದ್ಯಗಳನ್ನು ಆಡಿದ್ದ ಹಿಟ್​ಮ್ಯಾನ್​ ಕನಿಷ್ಠ ಅರ್ಧಶತಕ ಸಿಡಿಸಲು ಸಾಧ್ಯವಾಗಿರಲಿಲ್ಲ. ಈ ಸರಣಿಯ 6 ಇನ್ನಿಂಗ್ಸ್​ಗಳಲ್ಲಿ ಕೇವಲ 31 ರನ್​ ಗಳಿಸಿದ್ದರು. ಅಲ್ಲದೇ ರನ್​ ಗಳಿಸಲು ಹೆಣಗಾಡುತ್ತಿದ್ದ ಅವರು ಬಿಜಿಟಿ ಸರಣಿಯ 5ನೇ ಮತ್ತು ಅಂತಿಮ ಪಂದ್ಯದಿಂದ ಹೊರಗುಳಿದಿದ್ದರು.

ಫಾರ್ಮ್​ ಅನ್ನು ಮರಳಿ ಪಡೆಯಲು ಮುಂದಾಗಿರುವ ರೋಹಿತ್​ ಶರ್ಮಾ ರಣಜಿ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಅದರಂತೆ ಗುರುವಾರ ಆರಂಭವಾಗಿರುವ ರಣಜಿಯಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದರು. ಶರದ್​ ಪವಾರ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ್​ ವಿರುದ್ಧ ಟಾಸ್​ ಗೆದ್ದ ಮುಂಬೈ ನಾಯಕ ಅಜಿಂಕ್ಯಾ ರಹಾನೆ ಮೊದಲಿಗೆ ಬ್ಯಾಟಿಂಗ್​ ಮಾಡಲು ನಿರ್ಧರಿಸಿದರು. ಆರಂಭಿಕರಾಗಿ ಬ್ಯಾಟಿಂಗ್​ಗೆ ಬಂದ ರೋಹಿತ್​ ಶರ್ಮಾ ಮತ್ತೊಮ್ಮೆ ನಿರಾಸೆ ಮೂಡಿಸಿದರು.

19 ಎಸೆತಗಳನ್ನು ಎದುರಿಸಿದ ಹಿಟ್​ಮ್ಯಾನ್ ಕೇವಲ 3 ರನ್​ ಮಾತ್ರ ಕಲೆಹಾಕಿದರು. ಉಮಾರ್​ ನಝಿರ್​ ಎಸೆದ ಬೌಲಿಂಗ್​ನಲ್ಲಿ ರೋಹಿತ್ ಕ್ಯಾಚ್​ ನೀಡಿ ಪೆವಿಲಿಯನ್​ ಸೇರಿದರು. ಇದರೊಂದಿಗೆ ರೋಹಿತ್​ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ರೋಹಿತ್​ ಶರ್ಮಾ ಕಳೆದ 15 ಟೆಸ್ಟ್​ ಇನ್ನಿಂಗ್ಸ್​ಗಳಲ್ಲಿ 10.93 ಸರಾಸರಿಯಲ್ಲಿ ಕೇವಲ 164 ರನ್‌ಗಳನ್ನು ಮಾತ್ರ ಗಳಿಸಿದ್ದಾರೆ. ಇದರಲ್ಲಿ ಕೇವಲ ಒಂದು ಅರ್ಧಶತಕ ಮಾತ್ರ ಸೇರಿದೆ.  

ಟಾಸ್​ ಗೆದ್ದು ಮೊದಲ ಇನ್ನಿಂಗ್ಸ್​ ಆರಂಭಿಸಿರುವ ಮುಂಬೈ 19 ಓವರ್​​ ಮುಕ್ತಾಯದ ವೇಳೆಗೆ 60 ರನ್​ಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಆರಂಭಿಕರಾಗಿ ಬ್ಯಾಟಿಂಗ್​ ಮಾಡಿದ ಜೈಸ್ವಾಲ್​ 4 ರನ್ ​ಗಳಿಸಿ ಪೆವಿಲಿಯನ್​ ಸೇರಿದರೇ, ರೋಹಿತ್​ ಶರ್ಮಾ 3 ರನ್​ ಗಳಿಸಿ ವಿಕೆಟ್​ ಕೈಚೆಲ್ಲಿದರು.  ಜಮ್ಮು ಮತ್ತು ಕಾಶ್ಮೀರ ಪರ ಉಮರ್​ ನಾಝಿರ್ ನಾಲ್ಕು ವಿಕೆಟ್​ ಉರುಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments