Webdunia - Bharat's app for daily news and videos

Install App

IND vs AUS: ಟೀಂ ಇಂಡಿಯಾ ಬ್ಯಾಟರ್ ಗಳ ಪೆರೇಡ್ ನಲ್ಲಿ ಕೆಎಲ್ ರಾಹುಲ್ ಏಕಾಂಗಿ ಹೋರಾಟ

Krishnaveni K
ಸೋಮವಾರ, 16 ಡಿಸೆಂಬರ್ 2024 (10:22 IST)
Photo Credit: X
ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ಗಳ ಪೆವಿಲಿಯನ್ ಪೆರೇಡ್ ನಡೆಯುತ್ತಿದ್ದರೆ ಕೆಎಲ್ ರಾಹುಲ್ ಏಕಾಂಗಿ ಹೋರಾಟ ನಡೆಸುತ್ತಿದ್ದಾರೆ.

ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 445 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಆದರೆ ಟೀಂ ಇಂಡಿಯಾ ಇದಕ್ಕೆ ದಿಟ್ಟ ಉತ್ತರ ನೀಡುವುದು ಬಿಡಿ, ಹೋರಾಟದ ಮನೋಭಾವವನ್ನೂ ತೋರದೇ ಬಾಲ ಮುದುರಿಕೊಂಡಿದೆ. ಇನ್ನೂ ತಂಡದ ಮೊತ್ತ 50 ರನ್ ಗಳಾಗಿಲ್ಲ. ಆಗಲೇ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ಕಳೆದುಕೊಂಡು 48 ರನ್ ಗಳಿಸಿದೆ. ಮಳೆಯ ಅಡಚಣೆಯಿಂದಾಗಿ ಪಂದ್ಯ ಸದ್ಯಕ್ಕ ಸ್ಥಗಿತವಾಗಿದೆ. ಈ ಪಂದ್ಯದಲ್ಲಿ ಭಾರತ ಸೋಲಬಾರದೆಂದರೆ ಮಳೆಯೇ ಕಾಪಾಡಬೇಕು.

ಕೆಎಲ್ ರಾಹುಲ್ ಏಕಾಂಗಿಯಾಗಿ ಹೋರಾಟ ನಡೆಸುತ್ತಿದ್ದಾರೆ. 52 ಎಸೆತಗಳಿಂದ 30 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇನ್ನೂ ಖಾತೆ ತೆರೆಯದೇ ಇರುವ ರೋಹಿತ್ ಶರ್ಮಾ ಕ್ರೀಸ್ ನಲ್ಲಿದ್ದಾರೆ.

ಉಳಿದಂತೆ ಯಶಸ್ವಿ ಜೈಸ್ವಾಲ್ 4, ಶುಬ್ಮನ್ ಗಿಲ್ 1, ವಿರಾಟ್ ಕೊಹ್ಲಿ 3, ರಿಷಭ್ ಪಂತ್ 9 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಭಾರತ ಇನ್ನೂ 397 ರನ್ ಗಳ ಹಿನ್ನಡೆಯಲ್ಲಿದೆ. ಮತ್ತೆ ಟಾಪ್ ಆರ್ಡರ್ ಬ್ಯಾಟಿಂಗ್ ಕೈ ಕೊಟ್ಟಿರುವುದು ನೋಡಿದರೆ ತಂಡದ ಬ್ಯಾಟಿಂಗ್ ಗೆ ಭರ್ಜರಿ ಸರ್ಜರಿ ಮಾಡುವ ಅಗತ್ಯವಿದೆ ಎನಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments