Webdunia - Bharat's app for daily news and videos

Install App

IND vs AUS: ರೋಹಿತ್ ಅಲ್ಲ, ಮೊದಲು ಗಂಭೀರ್ ಹೋಗಬೇಕು: ಟೀಂ ಇಂಡಿಯಾ ಬ್ಯಾಟಿಂಗ್ ವೈಫಲ್ಯಕ್ಕೆ ಫ್ಯಾನ್ಸ್ ಗರಂ

Krishnaveni K
ಶುಕ್ರವಾರ, 3 ಜನವರಿ 2025 (11:15 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್ ಮುಂದುವರಿದಿದೆ. ಹೀಗಾಗಿ ಆಕ್ರೋಶಗೊಂಡ ಫ್ಯಾನ್ಸ್ ರೋಹಿತ್ ಅಲ್ಲ ಮೊದಲು ಗಂಭೀರ್ ಕೋಚ್ ಹುದ್ದೆಯಿಂದ ಹೋಗಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಗೌತಮ್ ಗಂಭೀರ್ ಕೋಚ್ ಆದಾಗನಿಂದ ಟೀಂ ಇಂಡಿಯಾದ ಬ್ಯಾಟಿಂಗ್ ತಳಮಟ್ಟ ತಲುಪಿದೆ. ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಸ್ವತಃ ನಾಯಕ ರೋಹಿತ್ ಶರ್ಮಾರನ್ನೇ ಆಡುವ ಬಳಗದಿಂದ ಹೊರಗಿಟ್ಟಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಕೊಹ್ಲಿಸೇರಿದಂತೆ ತಂಡದ ಟಾಪ್ ಆರ್ಡರ್ ಬ್ಯಾಟಿಗರೆಲ್ಲಾ ಜುಜುಬಿ ಮೊತ್ತಕ್ಕೆ ಔಟಾಗಿದ್ದಾರೆ.

ಈ ನಡುವೆ ನೆಟ್ಟಿಗರು ಗೌತಮ್ ಗಂಭೀರ್ ಮೇಲೆ ಇನ್ನಿಲ್ಲದಂತೆ ಆಕ್ರೋಶ ಹೊರಹಾಕುತ್ತಾರೆ. ಕೊಹ್ಲಿ ಕೂಡಾ ಕಳೆದ ಕೆಲವು ತಿಂಗಳುಳಗಳಿನಿಂದ ಮೊದಲಿನ ಫಾರ್ಮ್ ನಲ್ಲಿಲ್ಲ. ಹಾಗಿದ್ದರೂ ಅವರಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ರೋಹಿತ್ ಕಳೆದ ಎರಡು ಸರಣಿಗಳಲ್ಲಿ ಆಡಿಲ್ಲ ಎಂದು ಅವರಿಗೆ ಈ ರೀತಿ ಅವಮಾನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಭೀರ್ ಕೋಚ್ ಆಗುವವರೆಗೂ ತಂಡ ಹೀಗಿರಲಿಲ್ಲ. ಗಂಭೀರ್ ಕೋಚ್ ಆದ ಮೇಲೆ ತಂಡದಲ್ಲಿ ಯಾವುದೂ ಸರಿಯಿಲ್ಲ. ಹೀಗಾಗಿ ತಂಡದಿಂದ ತೊಲಗಬೇಕಾಗಿರುವುದು ರೋಹಿತ್, ಕೊಹ್ಲಿ ಅಲ್ಲ. ಮೊದಲು ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ರನ್ನು ಹೊರಗೆ ಹಾಗಬೇಕು. ಕೇವಲ ಐಪಿಎಲ್ ಸಕ್ಸಸ್ ನೋಡಿ ಗಂಭೀರ್ ನ್ನು ಕೋಚ್ ಮಾಡಬಾರದಿತ್ತು ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments