Webdunia - Bharat's app for daily news and videos

Install App

IND vs SL ODI: ಒಂದೇ ಮ್ಯಾಚ್ ನಲ್ಲಿ ಫೈಲ್ಯೂರ್, ಕೆಎಲ್ ರಾಹುಲ್ ಗೆ ಇದೆಂಥಾ ಶಿಕ್ಷೆ

Krishnaveni K
ಮಂಗಳವಾರ, 6 ಆಗಸ್ಟ್ 2024 (11:14 IST)
ಕೊಲಂಬೊ: ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿರುವ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಶೂನ್ಯಕ್ಕೆ ನಿರ್ಗಮಿಸಿದ್ದ ಕೆಎಲ್ ರಾಹುಲ್ ಭಾರೀ ಟೀಕೆಗೊಳಗಾಗಿದ್ದರು. ಇದೀಗ ಮೂರನೇ ಪಂದ್ಯಕ್ಕೆ ರಾಹುಲ್ ರನ್ನು ಕಿತ್ತು ಹಾಕಲಾಗುತ್ತದೆ ಎಂಬ ಮಾತು ಕೇಳಿಬರುತ್ತಿದೆ.

ಟೀಂ ಇಂಡಿಯಾದಲ್ಲಿ ಈಗ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನಕ್ಕೆ ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್ ನಡುವೆ ಪೈಪೋಟಿಯಿದೆ. ಮೊದಲ ಎರಡು ಪಂದ್ಯಕ್ಕೆ ರಿಷಬ್ ಕಡೆಗಣಿಸಿ ಕೆಎಲ್ ರಾಹುಲ್ ಗೆ ಅವಕಾಶ ನೀಡಿದ್ದಕ್ಕೇ ರಿಷಬ್ ಪಂತ್ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದರು.

ಆದರೆ ಕೆಎಲ್ ರಾಹುಲ್ ಅನುಭವದಲ್ಲಿ ಪಂತ್ ಗಿಂತಹ ಹಿರಿಯ ಆಟಗಾರ. ಜೊತೆಗೆ ಅವರ ದಾಖಲೆಯೂ ಉತ್ತಮವಾಗಿದೆ ಎಂಬ ಕಾರಣಕ್ಕೆ ಅವರಿಗೆ ಅವಕಾಶ ನೀಡಲಾಗಿತ್ತು. ಆದರೆ ಎರಡೂ ಪಂದ್ಯಗಳಲ್ಲಿ ತೀರಾ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದ ರಾಹುಲ್ ಗೆ ಯಶಸ್ಸು ಸಿಗಲಿಲ್ಲ.

ಇದೀಗ ಮೂರನೇ ಪಂದ್ಯವನ್ನು ಟೀಂ ಇಂಡಿಯಾ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಹೀಗಿರುವಾಗ ತಂಡದಿಂದ ರಾಹುಲ್ ಗೆ ಕೊಕ್ ಕೊಟ್ಟು ರಿಷಬ್ ಗೆ ಅವಕಾಶ ನೀಡಬಹುದು ಎಂಬ ಮಾತು ಕೇಳಿಬರುತ್ತಿದೆ. ಇದು ರಾಹುಲ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಹಬುದು. ಈಗಾಗಲೇ ರಾಹುಲ್ ಟಿ20 ಕ್ರಿಕೆಟ್ ನಿಂದ ಕಡೆಗಣಿಸಲ್ಪಟ್ಟಿದ್ದಾರೆ. ಆದರೆ ಏಕದಿನ ಮತ್ತು ಟೆಸ್ಟ್ ತಂಡದಲ್ಲಿ ಅವರು ಅನುಭವಿ ಆಟಗಾರರಾಗಿ ಉಳಿದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments