Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೊಲೊಂಬೋ: ಕೃನಾಲ್ ಪಾಂಡ್ಯಗೆ ಕೊರೋನಾ ಪಾಸಿಟಿವ್ ಆಗಿರುವುದರಿಂದ ಇಂದು ನಡೆಯಬೇಕಿದ್ದ ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯ ರದ್ದಾದ ಹಿನ್ನಲೆಯಲ್ಲಿ ಬಿಸಿಸಿಐ ಹೊಸ ದಿನಾಂಕ ಪ್ರಕಟಿಸಿದೆ.
ಇಂದು ನಡೆಯಬೇಕಿದ್ದ ಟಿ20 ಪಂದ್ಯ ನಾಳೆ ನಡೆಯಲಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಕೃನಾಲ್ ಪಾಂಡ್ಯ ಕೊರೋನಾ ಪಾಸಿಟಿವ್ ಆಗಿರುವುದನ್ನು ದೃಢಪಡಿಸಿರುವ ಬಿಸಿಸಿಐ ಇಂದಿನ ಪಂದ್ಯವನ್ನು ನಾಳೆಗೆ ಮುಂದೂಡಿಕೆ ಮಾಡಿವುದಾಗಿ ಪ್ರಕಟಣೆ ನೀಡಿದೆ.
ಇದರಿಂದಾಗಿ ಟೀಂ ಇಂಡಿಯಾ ಬುಧವಾರ ಮತ್ತು ಗುರುವಾರ ಎರಡೂ ದಿನ ಪಂದ್ಯ ನಡೆಯಲಿದೆ. ಗುರುವಾರ ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದೆ.