Webdunia - Bharat's app for daily news and videos

Install App

ಟೀಂ ಇಂಡಿಯಾ ಬಳಿಕ ಆರ್ ಸಿಬಿಯಲ್ಲೂ ತೀವ್ರ ಟ್ರೋಲ್ ಆದ ರಜತ್ ಪಾಟಿದಾರ್

Krishnaveni K
ಶನಿವಾರ, 30 ಮಾರ್ಚ್ 2024 (12:00 IST)
Photo Courtesy: Twitter
ಬೆಂಗಳೂರು: ಟೀಂ ಇಂಡಿಯಾ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸತತ ಮೂರು ಪಂದ್ಯಗಳಲ್ಲಿ ಅವಕಾಶ ಸಿಕ್ಕಿಯೂ ಬಳಸಿಕೊಳ್ಳದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ರಜತ್ ಪಾಟಿದಾರ್ ಈಗ ಆರ್ ಸಿಬಿಯಲ್ಲೂ ಅದೇ ರೀತಿ ಟ್ರೋಲ್ ಆಗುತ್ತಿದ್ದಾರೆ.

ರಜತ್ ಪಟಿದಾರ್ ಎಂಬಾತನನ್ನು ಆರ್ ಸಿಬಿ ಅದ್ಯಾಕೆ ತಂಡದಲ್ಲಿ ಇಟ್ಟುಕೊಂಡಿದೆಯೋ ಎಂದು ಅಭಿಮಾನಿಗಳು ಇನ್ನಿಲ್ಲದಂತೆ ಆಕ್ರೋಶ ಹೊರಹಾಕುತ್ತಿದ್ದಾರೆ. ನಿನ್ನೆಯ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್ ಸಿಬಿ 7 ವಿಕೆಟ್ ಗಳ ಹೀನಾಯ ಸೋಲು ಅನುಭವಿಸಿತ್ತು. ಆರ್ ಸಿಬಿ ಪರ ಕೊಹ್ಲಿ ಏಕಾಂಗಿಯಾಗಿ 83 ರನ್ ಸಿಡಿಸಿ ತಂಡಕ್ಕೆ ಆಧಾರವಾಗಿದ್ದರು.

ಆದರೆ ಈ ಪಂದ್ಯದಲ್ಲೂ ರಜತ್ ಪಾಟಿದಾರ್ 4 ಎಸೆತ ಎದುರಿಸಿ ಕೇವಲ 3 ರನ್ ಗೆ ವಿಕೆಟ್ ಒಪ್ಪಿಸಿದ್ದರು. ಇದಕ್ಕೆ ಮೊದಲು ನಡೆದ ಎರಡು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ಶೂನ್ಯ ಎರಡನೇ ಪಂದ್ಯದಲ್ಲಿ ರಜತ್ ಗಳಿಸಿದ್ದು ಕೇವಲ 18 ರನ್. ಮಧ‍್ಯಮ ಕ್ರಮಾಂಕದಲ್ಲಿ ರಜತ್ ಬೇಗನೇ ಔಟಾಗುವುದರಿಂದ ಆರ್ ಸಿಬಿ ಕುಸಿತಕ್ಕೊಳಗಾಗುತ್ತಿದೆ.

ಹೀಗಾಗಿ ಅಭಿಮಾನಿಗಳು ರಜತ್ ರನ್ನು ತಂಡದಲ್ಲಿ ಉಳಿಸಿಕೊಂಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರೊಬ್ಬ ವೇಸ್ಟ್ ಆಟಗಾರ ಎನ್ನುತ್ತಿದ್ದಾರೆ. ಆರ್ ಸಿಬಿ ಬ್ಯಾಟಿಂಗ್ ಸುಧಾರಿಸಬೇಕಾದರೆ ಮೊದಲು ಪಾಟೀದಾರ್ ಗೆ ಕೊಕ್ ಕೊಡಿ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments