Webdunia - Bharat's app for daily news and videos

Install App

ಐಪಿಎಲ್ 2024: ಸಿಎಸ್ ಕೆ ವಿರುದ್ಧ ಗೆಲುವಿನ ಬಳಿಕ ಮೈಮರೆತು ಬೆಳಗಿನ ಜಾವದವರೆಗೆ ಆರ್ ಸಿಬಿ ಪಾರ್ಟಿ

Krishnaveni K
ಶುಕ್ರವಾರ, 24 ಮೇ 2024 (09:34 IST)
Photo Courtesy: Twitter
ಬೆಂಗಳೂರು: ಐಪಿಎಲ್ 2024 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊನೆಯ ಲೀಗ್ ಪಂದ್ಯ ಗೆದ್ದ ಬಳಿಕ ಆರ್ ಸಿಬಿ ಆಟಗಾರರು ಎಷ್ಟು ಮೈಮರೆತಿದ್ದರೆಂದರೆ ಬೆಳಗಿನ ಜಾವದವರೆಗೂ ಪಾರ್ಟಿ ಮಾಡುತ್ತಿದ್ದರು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ಕೊನೆಯ ಲೀಗ್ ಪಂದ್ಯವನ್ನು ಗೆದ್ದು ಪ್ಲೇ ಆಫ್ ಗೆ ಅರ್ಹತೆ ಪಡೆಯುತ್ತಿದ್ದಂತೇ ಆರ್ ಸಿಬಿ ಆಟಗಾರರು ಫೈನಲ್ ಗೆದ್ದಂತೆ ಕುಣಿದಾಡಿದ್ದರು. ಅವರ ಈ ಮಟ್ಟಿಗಿನ ಸಂಭ್ರಮಾಚರಣೆ ಟೀಕೆಗೆ ಗುರಿಯಾಗಿತ್ತು. ಆದರೆ ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ ಕೇವಲ ಮೈದಾನದಲ್ಲಿ ಮಾತ್ರವಲ್ಲ, ಹೊರಗೆಯೂ ಮುಂದುವರಿದಿತ್ತು ಎನ್ನಲಾಗಿದೆ.

ಆರ್ ಸಿಬಿ ಬೌಲರ್ ಯಶ್ ದಯಾಳ್ ತಂದೆ ಈ ವಿಚಾರವನ್ನು ಹೊರಹಾಕಿದ್ದಾರೆ. ಚೆನ್ನೈ ಸೋಲಿಸಿದ ಬಳಿಕ ಆರ್ ಸಿಬಿ ಆಟಗಾರರು ಭಾರೀ ಸಂತೋಷದಲ್ಲಿದ್ದರು. ಬೆಳಗಿನ ಜಾವ 5 ಗಂಟೆಯವರೆಗೂ ಪಾರ್ಟಿ ಮಾಡಿ ಸಂತೋಷಪಟ್ಟರು ಎಂದು ಹೇಳಿದ್ದಾರೆ.

ಆದರೆ ಅವರ ಈ ಹೇಳಿಕೆಯೇ ಈಗ ಆರ್ ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಆ ರೀತಿ ಮೈಮರೆತಿದ್ದಕ್ಕೇ ಮುಂದಿನ ಪಂದ್ಯದಲ್ಲಿ ಸೋತು ಕೂಟದಿಂದ ನಿರ್ಗಮಿಸುವ ಪರಿಸ್ಥಿತಿ ಬಂದಿದೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ. ಇದಾದ ಬಳಿಕ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅಹಮ್ಮದಾಬಾದ್ ನಲ್ಲಿ ನಡೆದ ಪ್ಲೇ ಆಫ್ ಪಂದ್ಯದಲ್ಲಿ ಆರ್ ಸಿಬಿ ಸೋಲು ಅನುಭವಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಪ್ಲೇ ಆಫ್‌ಗೆ ಜೀವ ತುಂಬಲು ಮತ್ತೇ ಆರ್‌ಸಿಬಿಯನ್ನು ಸೇರಿಕೊಂಡ ಟಿಮ್ ಡೇವಿಡ್‌

Rajat Patidar: ಆರ್ ಸಿಬಿ ಅಭಿಮಾನಿಗಳ ಆತಂಕ ನಿವಾರಸಿದ ರಜತ್ ಪಾಟೀದಾರ್

Boycott Delhi Capitals ಟ್ರೆಂಡ್: ಭಾರತ ವಿರೋಧಿ ದೇಶದ ಆಟಗಾರನೇ ಕಾರಣ

Shahid Afridi: ಪಾಕಿಸ್ತಾನದ ಅಭಿವೃದ್ಧಿಯನ್ನು ಭಾರತವೇ ತಡೆಯುತ್ತಿದೆ ಎಂದ ಶಾಹಿದ್ ಅಫ್ರಿದಿ

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

ಮುಂದಿನ ಸುದ್ದಿ
Show comments