Webdunia - Bharat's app for daily news and videos

Install App

ಐಪಿಎಲ್ 2024: ರಾಜಸ್ಥಾನ್ ರಾಯಲ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯ ಗೆದ್ದು ಬಾ ಆರ್ ಸಿಬಿ

Krishnaveni K
ಬುಧವಾರ, 22 ಮೇ 2024 (10:03 IST)
ಅಹಮ್ಮದಾಬಾದ್: ಐಪಿಎಲ್ 2024 ರಲ್ಲಿ ಇಂದು ಮತ್ತೊಮ್ಮೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಕುತೂಹಲದಿಂದ ಎದಿರು ನೋಡುತ್ತಿರುವ ದಿನವಾಗಿದೆ. ಇಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ ಸಿಬಿ ಎಲಿಮಿನೇಟರ್ ಪಂದ್ಯವಾಡಲಿದೆ.

ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಲಿದೆ. ಸೋತ ತಂಡ ನೇರವಾಗಿ ಟೂರ್ನಿಯಿಂದ ಹೊರಬೀಳಲಿದೆ. ಆರ್ ಸಿಬಿ ಕಳೆದ ಆರು ಪಂದ್ಯಗಳಿಂದ ಸತತವಾಗಿ ಗೆಲ್ಲುತ್ತಲೇ ಬಂದಿದೆ. ಹೀಗಾಗಿ ಇಂದಿನ ಪಂದ್ಯವನ್ನೂ ಗೆದ್ದು ಟೂರ್ನಿಯಲ್ಲಿ ಮುನ್ನಡೆಯುವ ಮೂಲಕ ಅಭಿಮಾನಿಗಳ ಬಹುದಿನಗಳ ಕನಸು ನನಸಾಗಿಸುವ ಭರವಸೆಯಲ್ಲಿದೆ.

ಆರ್ ಸಿಬಿ ಇದುವರೆಗೆ ಮೂರು ಬಾರಿ ಎಲಿಮಿನೇಟರ್ ಪಂದ್ಯವಾಡಿದೆ. ಈ ಪೈಕಿ ಗೆದ್ದಿದ್ದು ಕೇವಲ ಒಂದು ಬಾರಿ ಮಾತ್ರ. ಆದರೆ ಈ ಬಾರಿ ಆರ್ ಸಿಬಿ ಅತ್ಯುತ್ತಮ ಫಾರ್ಮ್ ನಲ್ಲಿದೆ. ಕ್ಯಾಮರೂನ್ ಗ್ರೀನ್, ರಜತ್ ಪಟಿದಾರ್, ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್ ನಲ್ಲಿದ್ದಾರೆ. ಗ್ಲೆನ್ ಮ್ಯಾಕ್ಸ್ ವೆಲ್ ಗೆ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಆದರೆ ಬೌಲಿಂಗ್ ನಲ್ಲಿ ಮಿಂಚಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ತಂಡದಲ್ಲಿ ಯಶ್ ದಯಾಳ್, ಸ್ವಪ್ನಿಲ್ ಸಿಂಗ್ ಜೊತೆಗೆ ಅನುಭವಿ ಫರ್ಗ್ಯುಸನ್, ಮೊಹಮ್ಮದ್ ಸಿರಾಜ್ ಅತ್ಯುತ್ತಮ ಕೊಡುಗೆ ನೀಡುತ್ತಿದ್ದಾರೆ. ಇದು ಆರ್ ಸಿಬಿ ಅವಕಾಶ ಹೆಚ್ಚಿಸಿದೆ.

ಇತ್ತ ರಾಜಸ್ಥಾನ್ ರಾಯಲ್ಸ್ ಕೂಡಾ ಕಡಿಮೆಯೇನಲ್ಲ. ಸ್ವತಃ ನಾಯಕ ಸಂಜು ಸ್ಯಾಮ್ಸನ್ ಸಿಡಿದು ನಿಂತು ತಂಡವನ್ನು ಏಕಾಂಗಿಯಾಗಿ ಗೆಲುವಿನತ್ತ ಕೊಂಡೊಯ್ಯಬಲ್ಲರು. ಅವರಿಗೆ ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮೈರ್ ನಂತಹ ಘಟಾನುಘಟಿ ಟಿ20 ಸ್ಪೆಷಲಿಸ್ಟ್ ಗಳು ತಂಡದಲ್ಲಿದ್ದಾರೆ. ಹೀಗಾಗಿ ಆರ್ ಸಿಬಿ ಬೌಲರ್ ಗಳು ಎಚ್ಚರಿಕೆಯಿಂದ ಬೌಲಿಂಗ್ ಮಾಡಬೇಕಿದೆ. ಈ ಜಿದ್ದಾಜಿದ್ದಿನ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments