Webdunia - Bharat's app for daily news and videos

Install App

ದ್ರಾವಿಡ್ ಮಾತಿಗೂ ಡೋಂಟ್ ಕೇರ್: ರಣಜಿಗೆ ಗೈರಾದ ಇಶಾನ್ ಕಿಶನ್

Krishnaveni K
ಶನಿವಾರ, 13 ಜನವರಿ 2024 (08:21 IST)
ರಾಂಚಿ: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ಇಶಾನ್ ಕಿಶನ್ ನಿನ್ನೆಯಿಂದ ಆರಂಭವಾದ ಮಹಾರಾಷ್ಟ್ರ ವಿರುದ್ಧದ ರಣಜಿ ಪಂದ್ಯದಲ್ಲಿ ಜಾರ್ಖಂಡ್ ಪರ ಆಡಬೇಕಿತ್ತು. ಆದರೆ ಅವರು ಗೈರಾಗಿದ್ದಾರೆ.

ಮಾನಸಿಕವಾಗಿ ಸುಸ್ತಾಗಿರುವುದಾಗಿ ಹೇಳಿ ಇಶಾನ್ ದ.ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದರು. ಆದರೆ ಬಳಿಕ ಅವರು ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದು, ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿತ್ತು ಎಂದು ವರದಿಯಾಗಿತ್ತು. ಹೀಗಾಗಿಯೇ ಅವರನ್ನು ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಿಲ್ಲ ಎಂಬ ಸುದ್ದಿಗಳಿತ್ತು. ಆದರೆ ಕೋಚ್ ದ್ರಾವಿಡ್ ಇದನ್ನು ನಿರಾಕರಿಸಿದ್ದರು.

ಹಾಗಿದ್ದರೂ ದ್ರಾವಿಡ್ ಸೂಚನೆಯಂತೆ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡಕ್ಕೆ ಆಯ್ಕೆಯಾಗಲು ರಣಜಿ ಪಂದ್ಯದಲ್ಲಿ ಆಡಬೇಕಿತ್ತು.

ಆದರೆ ದ್ರಾವಿಡ್ ಸೂಚನೆಗೂ ಡೋಂಟ್ ಕೇರ್ ಮಾಡಿರುವ ಇಶಾನ್ ರಣಜಿಯಿಂದ ಹೊರಗುಳಿದಿದ್ದಾರೆ. ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಷನ್ ಕೂಡಾ ನಮ್ಮ ಜೊತೆ ಇಶಾನ್ ರಣಜಿ ಆಡುವ ಬಗ್ಗೆ ಮಾತನಾಡಿಲ್ಲ. ಒಂದು ವೇಳೆ ಅವರು ಲಭ‍್ಯರಿದ್ದಾರೆ ಎಂದಿದ್ದರೆ ಸೀದಾ ಆಡುವ ಬಳಗದಲ್ಲಿ ಸ್ಥಾನ ಪಡೆಯುತ್ತಿದ್ದರು ಎಂದಿದ್ದಾರೆ. ಹೀಗಾಗಿ ಇಂಗ್ಲೆಂಡ್ ಸರಣಿಗೆ ಇಶಾನ್ ಆಯ್ಕೆಯಾಗುತ್ತಾರೋ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments