ಇಶಾಂತ್ ಶರ್ಮಾಗೆ ಗಾಯ: ಮತ್ತೆ ದ್ರಾವಿಡ್ ನೇತೃತ್ವದ ಎನ್ ಸಿಎ ಮೇಲೆ ತೂಗುಗತ್ತಿ

Webdunia
ಸೋಮವಾರ, 2 ಮಾರ್ಚ್ 2020 (08:59 IST)
ಬೆಂಗಳೂರು: ಗಾಯದಿಂದ ಚೇತರಿಸಿಕೊಂಡು ಕೆಲವೇ ದಿನಗಳಲ್ಲಿ ಮತ್ತೆ ಇಶಾಂತ್ ಶರ್ಮಾ ಗಾಯದ ಗೂಡು ಸೇರಿರಿಕೊಂಡಿರುವುದರಿಂದ ಎನ್ ಸಿಎ ಕಾರ್ಯವೈಖರಿ ಮೇಲೆ ಅನುಮಾನಪಡುವಂತಾಗಿದೆ.

 
ರಾಹುಲ್ ದ್ರಾವಿಡ್ ಅಧ್ಯಕ್ಷರಾದ ಬಳಿಕ ಎನ್ ಸಿಎನಲ್ಲಿ ಇಂತಹ ಪ್ರಕರಣಗಳು ನಡೆಯುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ ಕೂಡಾ ಇದೇ ರೀತಿಯಲ್ಲಿ ಪದೇ ಪದೇ ಗಾಯದ ಸಮಸ್ಯೆಗೆ ತುತ್ತಾದಾಗ ಭಾರೀ ವಿವಾದವಾಗಿತ್ತು. ಎನ್ ಸಿಎ ತಪಾಸಣೆ ರೀತಿಯೇ ಸರಿಯಿಲ್ಲ ಎಂಬ ಆಕ್ರೋಶಗಳು ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಗಂಗೂಲಿ ದ್ರಾವಿಡ್ ಜತೆಗೆ ಮಾತುಕತೆಯನ್ನೂ ನಡೆಸಿದ್ದರು.

ಆದರೆ ಇದೀಗ ಮತ್ತೆ ಇಶಾಂತ್ ಇದೇ ರೀತಿ ಪದೇ ಪದೇ ಗಾಯದ ಸಮಸ್ಯೆಗೆ ತುತ್ತಾಗಿರುವುದರಿಂದ ಎನ್ ಸಿಎ ಕಾರ್ಯವೈಖರಿ ಮೇಲೆ ಪ್ರಶ್ನೆ ಮೂಡಿದೆ. ಎನ್ ಸಿಎಯ ಪ್ರತಿಯೊಂದು ನಿರ್ಧಾರಗಳೂ ದ್ರಾವಿಡ್ ಕೈಯಲ್ಲಿರುವುದರಿಂದ ಇದೀಗ ಈ ವಿವಾದಗಳು ದ್ರಾವಿಡ್ ಗೆ ಕುತ್ತಾಗುವ ಸಂಭವವಿದೆ. ಆಟಗಾರನಾಗಿ, ಕೋಚ್ ಆಗಿ ಅದ್ಭುತವಾಗಿ ಕಾರ್ಯನಿರ್ವಹಣೆ ಮಾಡಿ ಕಳಂಕರಹಿತರಾಗಿದ್ದ ದ್ರಾವಿಡ್ ಗೆ ಈ ವಿವಾದಗಳು ಯಾಕೋ ಉರುಳಾಗುವ ಲಕ್ಷಣ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments