Webdunia - Bharat's app for daily news and videos

Install App

ಜಸ್‌ಪ್ರೀತ್‌ ಬೂಮ್ರಾ ದಾಳಿಗೆ ತತ್ತರಿಸಿದ ಬಾಂಗ್ಲಾ: ಭಾರತಕ್ಕೆ ಭಾರೀ ಮುನ್ನಡೆ

Sampriya
ಶುಕ್ರವಾರ, 20 ಸೆಪ್ಟಂಬರ್ 2024 (14:46 IST)
Photo Courtesy X
ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲ ಟೆಸ್ಟ್‌ನ ಎರಡನೇ ದಿನವಾದ ಶುಕ್ರವಾರ ಭಾರತ ಮೇಲುಗೈ ಸಾಧಿಸಿದೆ.  

ಭಾರತದ ಮೊದಲ ಇನಿಂಗ್ಸ್‌ನಲ್ಲಿ ಗಳಿಸಿದ್ದ 376 ರನ್‌ಗೆ ಉತ್ತರವಾಗಿ ಬಾಂಗ್ಲಾದೇಶ ಟೀ ವಿರಾಮದ ಹೊತ್ತಿಗೆ 36.5 ಓವರ್‌ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿದ್ದು, ಸಂಕಷ್ಟದಲ್ಲಿದೆ. ಬಾಂಗ್ಲಾ ತಂಡವು ಇನ್ನೂ ಎರಡು ವಿಕೆಟ್ ಮಾತ್ರ ಬಾಕಿ ಉಳಿದಿರುವಂತೆಯೇ 264 ರನ್‌ಗಳ ಹಿನ್ನಡೆಯಲ್ಲಿದ್ದು, ಫಾಲೋಆನ್‌ ಭೀತಿಯಲ್ಲಿದೆ.

40 ರನ್ ಗಳಿಸುವಷ್ಟರಲ್ಲಿ ಬಾಂಗ್ಲಾದೇಶ ತಂಡ ಐದು ವಿಕೆಟ್ ಕಳೆದುಕೊಂಡಿತ್ತು. ಭಾರತೀಯ ವೇಗಿಗಳಾದ ಜಸ್‌ಪ್ರೀತ್ ಬೂಮ್ರಾ, ಆಕಾಶ್ ದೀಪ್ ಮತ್ತು ಮೊಹಮ್ಮದ್ ಸಿರಾಜ್ ಬಾಂಗ್ಲಾದೇಶಕ್ಕೆ ಆರಂಭದಲ್ಲೇ ಬಲವಾದ ಪೆಟ್ಟು ಕೊಟ್ಟರು. ಬೂಮ್ರಾ ಮೂರು ಮತ್ತು ಆಕಾಶ್ ದೀಪ್ ಹಾಗೂ ರವಿಂದ್ರ ಜಡೇಜ ತಲಾ ಎರಡು ಮತ್ತು ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಕಬಳಿಸಿದರು.

ಈ ಮೊದಲು ಭಾರತ ತಂಡ 91.2 ಓವರ್‌ಗಳಲ್ಲಿ 376 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ರವೀಂದ್ರ ಜಡೇಜ ಹಾಗೂ ರವಿಚಂದ್ರನ್ ಅಶ್ವಿನ್ ಏಳನೇ ವಿಕೆಟ್‌ಗೆ 199 ರನ್‌ಗಳ ಜೊತೆಯಾಟ ಕಟ್ಟಿದರು. 86 ರನ್ ಗಳಿಸಿದ ಜಡೇಜ ಶತಕ ವಂಚಿತರಾದರು. ಮೊದಲ ದಿನದಾಟದಲ್ಲಿ ಟೆಸ್ಟ್ ಕ್ರಿಕೆಟ್‌ನ ಆರನೇ ಶತಕ ಸಾಧನೆ ಮಾಡಿದ ಅಶ್ವಿನ್ 133 ಎಸೆತಗಳಲ್ಲಿ 113 ರನ್ ಗಳಿಸಿ ಔಟ್ ಆದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments