Publish Date: Sat, 12 May 2018 (07:08 IST)
Updated Date: Sat, 12 May 2018 (07:09 IST)
ಪುಣೆ: ನಾಯಕನಾಗಿ ಧೋನಿ ಅದ್ಭುತವಾಗಿ ತನ್ನ ತಂಡದ ಆಟಗಾರರನ್ನು ಬಳಸಿಕೊಳ್ಳುತ್ತಾರೆ. ಅದುವೇ ಅವರ ನಾಯಕತ್ವದ ಗುಟ್ಟು ಎಂದು ಮಾಜಿ ಕ್ರಿಕೆಟಿಗ ಕೆ. ಶ್ರೀಕಾಂತ್ ಹೇಳಿದ್ದಾರೆ.
ಚೆನ್ನೈ ತಂಡದ ಕೋಚ್ ಆಗಿಯೂ ಕಾರ್ಯನಿರ್ವಹಿಸಿದ್ದ ಶ್ರೀಕಾಂತ್ ‘ಧೋನಿ ತಮ್ಮ ತಂಡದ ಪ್ರತೀ ಆಟಗಾರನಿಗೂ ನಿರ್ದಿಷ್ಟ ಜವಾಬ್ದಾರಿ ಒದಗಿಸುತ್ತಾರೆ. ಹೀಗಾಗಿ ಎಲ್ಲಾ ಆಟಗಾರರಿಗೂ ತಮ್ಮ ಜವಾಬ್ದಾರಿಯ ಅರಿವಿರುತ್ತದೆ’ ಎಂದು ಶ್ರೀಕಾಂತ್ ಹೇಳಿಕೊಂಡಿದ್ದಾರೆ.
ಈ ಬಾರಿಯ ಐಪಿಎಲ್ ನಲ್ಲಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರನಾಗಿ ಕಾರ್ಯನಿರ್ವಹಿಸುತ್ತಿರುವ ಧೋನಿ ಈ ಆವೃತ್ತಿಯನ್ನು ಗೆಲ್ಲುವ ಎಲ್ಲಾ ಲಕ್ಷಣಗಳಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.