Webdunia - Bharat's app for daily news and videos

Install App

ಗೌತಮ್ ಗಂಭೀರ್ ಕೋಚ್ ಆದರೆ ಕೆಎಲ್ ರಾಹುಲ್ ಗೆ ಅದೃಷ್ಟ ಖುಲಾಯಿಸುತ್ತಾ

Krishnaveni K
ಬುಧವಾರ, 10 ಜುಲೈ 2024 (11:42 IST)
Photo Credit: X
ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದು ಈಗ ಕೆಎಲ್ ರಾಹುಲ್ ಅಭಿಮಾನಿಗಳ ಮುಖದಲ್ಲಿ ಕೊಂಚ ಸಮಾಧಾನ ಮೂಡಿದೆ. ಟಿ20 ಕ್ರಿಕೆಟ್ ನಿಂದ ಸಂಪೂರ್ಣವಾಗಿ ಸೈಡ್ ಲೈನ್ ಆಗಿದ್ದ ರಾಹುಲ್ ಗೆ ಇನ್ನು ತಂಡದಲ್ಲಿ ಸ್ಥಾನ ಸಿಗಬಹುದು ಎಂಬ ವಿಶ್ವಾಸ ಮೂಡಿದೆ.

ಕೆಎಲ್ ರಾಹುಲ್ ಮತ್ತು ಗೌತಮ್ ಗಂಭೀರ್ ಈಗಾಗಲೇ ಐಪಿಎಲ್ ನಲ್ಲಿ ಜೊತೆಯಾಗಿ ಕೆಲಸ ಮಾಡಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ರಾಹುಲ್ ಕೋಚ್ ಆಗಿದ್ದರೆ ಗಂಭೀರ್ ಮೆಂಟರ್ ಆಗಿದ್ದರು. ಇವರಿಬ್ಬರು ಎರಡು ಋತುವಿನಲ್ಲಿ ಜೊತೆಯಾಗಿ ಕೆಲಸ ಮಾಡಿದ್ದರು.

ಇದೀಗ ಕೆಎಲ್ ರಾಹುಲ್ ಟೀಂ ಇಂಡಿಯಾದಿಂದ ಕಿರು ಮಾದರಿ ಕ್ರಿಕೆಟ್ ನಲ್ಲಿ ಕಡೆಗಣಿಸಲ್ಪಟ್ಟಿದ್ದಾರೆ. ಮುಂದೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ರಾಹುಲ್ ನಾಯಕರಾಗಲಿದ್ದಾರೆ ಎಂಬ ಮಾತುಗಳಿವೆ. ಈ ಸರಣಿಗೆ ರೋಹಿತ್ ಶರ್ಮಾ ಗೈರಾಗುವ ಸಾಧ್ಯತೆಯಿದೆ. ವಿಶೇಷವೆಂದರೆ ಗಂಭೀರ್ ಗೂ ಟೀಂ ಇಂಡಿಯಾ ಕೋಚ್ ಆಗಿ ಇದು ಮೊದಲ ಸರಣಿಯಾಗಲಿದೆ.

ಹೀಗಾಗಿ ಗಂಭೀರ್ ಗೆ ಮುಖ್ಯ ಕೋಚ್ ಆಗಿ ಮೊದಲ ಸರಣಿಯಲ್ಲೇ ರಾಹುಲ್ ಜೊತೆ ಕೆಲಸ ಮಾಡುವ ಅವಕಾಶ ಸಿಗುವ ಸಾಧ್ಯತೆಯಿದೆ. ರಾಹುಲ್ ಜೊತೆಗೆ ಉತ್ತಮ ಬಾಂಧವ್ಯವಿಟ್ಟುಕೊಂಡಿರುವ ಗಂಭೀರ್ ಮುಂದೆ ಅವರನ್ನೇ ಏಕದಿನ ತಂಡದ ನಾಯಕನಾಗಿ ಮಾಡಲು ಲಾಬಿ ನಡೆಸಬಹುದು ಎಂಬುದು ರಾಹುಲ್ ಅಭಿಮಾನಿಗಳ ವಿಶ್ವಾಸ. ಹೀಗಾಗಿ ಗಂಭೀರ್ ಬಂದರೆ ರಾಹುಲ್ ಗೆ ಲಾಭ ಎನ್ನುವುದು ಅಭಿಮಾನಿಗಳ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನೀರಜ್‌ ಚೋಪ್ರಾ ಹೊಸ ಮೈಲಿಗಲ್ಲು: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ

Rohit Sharma: ಆ ಸ್ಟ್ಯಾಂಡ್ ಗೇ ಸಿಕ್ಸರ್ ಹೊಡಿ ಎಂದ ರವಿಶಾಸ್ತ್ರಿ: ರೋಹಿತ್ ಶರ್ಮಾ ಉತ್ತರ ವಿಡಿಯೋ ನೋಡಿ

Rohit Sharma video: ಎಲ್ಲರ ಎದುರೇ ಸಹೋದರನಿಗೆ ಬೈದ ರೋಹಿತ್ ಶರ್ಮಾ

Rohit Sharma Video: ಗುದ್ಬಿಡ್ತೀನಿ ನೋಡು: ಅಭಿಮಾನಿ ಜೊತೆ ರೋಹಿತ್ ಶರ್ಮಾ ಕೀಟಲೆ

RCB vs KKR match: ಚಿನ್ನಸ್ವಾಮಿಯಲ್ಲಿಂದು ಪಂದ್ಯ ನಡೆಯವುದೇ ಅನುಮಾನ

ಮುಂದಿನ ಸುದ್ದಿ
Show comments