Webdunia - Bharat's app for daily news and videos

Install App

ಆರ್ ಸಿಬಿ ಪರ ಆಡುವ ಆಸೆ ವ್ಯಕ್ತಪಡಿಸಿದ ಕೆಎಲ್ ರಾಹುಲ್

Krishnaveni K
ಶನಿವಾರ, 20 ಏಪ್ರಿಲ್ 2024 (14:14 IST)
ಬೆಂಗಳೂರು: ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡುವ ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ಈಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವ ಬಯಕೆ ವ್ಯಕ್ತಪಡಿಸಿದ್ದಾರೆ.

ಆರ್ ಸಿಬಿಯಲ್ಲಿದ್ದ ಕೆಎಲ್ ರಾಹುಲ್ ಬಳಿಕ ಪಂಜಾಬ್ ತಂಡಕ್ಕೆ ಬಿಕರಿಯಾಗಿದ್ದರು. ಅದಾದ ಬಳಿಕ ಕಳೆದ ಎರಡು ವರ್ಷಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಇದೀಗ ಅವರಿಗೆ ಮತ್ತೆ ಆರ್ ಸಿಬಿಗೆ ಮರಳುವ ಆಸೆಯಾಗಿದೆಯಂತೆ.

ನಿನ್ನೆ ಅವರ ಹುಟ್ಟುಹಬ್ಬದ ನಿಮಿತ್ತ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಯೂ ಟ್ಯೂಬ್ ಚಾನೆಲ್ ನಲ್ಲಿ ಸಂದರ್ಶನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ಮತ್ತೊಮ್ಮೆ ಆರ್ ಸಿಬಿ ಪರ ಆಡುವ ಆಸೆಯಿದೆ ಎಂದು ಹೇಳಿದ್ದಾರೆ. ಇದನ್ನು ಕೇಳಿ ಆರ್ ಸಿಬಿ ಫ್ಯಾನ್ಸ್ ಬಹಳ ಖುಷಿಯಾಗಿದ್ದಾರೆ. ನಿಮ್ಮನ್ನು ಕರೆತರಲು ನಾವು ಆನ್ ಲೈನ್ ನಲ್ಲಿ ಅಭಿಯಾನ ಆರಂಭಿಸಲು ರೆಡಿ ಎಂದಿದ್ದಾರೆ. ಮೊದಲೇ ಆರ್ ಸಿಬಿಯಲ್ಲಿ ಕನ್ನಡಿಗ ಆಟಗಾರರಿಲ್ಲ ಎಂಬ ಕೊರಗಿದೆ. ಇದೀಗ ರಾಹುಲ್ ಕಮ್ ಬ್ಯಾಕ್ ಮಾಡಲು ಇಷ್ಟ ಎಂದಿದ್ದು ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಮುಂದಿನ ಹರಾಜಿನಲ್ಲಿ ಹೇಗಾದರೂ ಮಾಡಿ ಅವರನ್ನು ಕರೆ ತನ್ನಿ ಎಂದು ಆರ್ ಸಿಬಿ ಮ್ಯಾನೇಜ್ ಮೆಂಟ್ ಗೆ ಆಗ್ರಹಿಸಿದ್ದಾರೆ.

ಅಶ್ವಿನ್ ಜೊತೆ ಮಾತುಕತೆಯಲ್ಲಿ ರಾಹುಲ್ ‘ನಾನು ಏನೇ ಆಗಿದ್ದರೂ ಮೊದಲು ಕರ್ನಾಟಕದವನು. ಕೆಎಸ್ ಸಿಎ ನನ್ನ ತವರು. ಚಿನ್ನ ಸ್ವಾಮಿಯಲ್ಲಿ ನನ್ನ ತವರು. ನಂತರ ಐಪಿಎಲ್ ಆಡಿದೆ. ಎಲ್ಲರೂ ತಮ್ಮ ತವರು ತಂಡದ ಪರ ಆಡಲು ಬಯಸುತ್ತಾರೆ. ನನಗೂ ಬೆಂಗಳೂರಿನ ಪರ ಐಪಿಎಲ್ ಆಡಲು ಮನಸ್ಸಿದೆ’ ಎಂದಿದ್ದಾರೆ. ರಾಹುಲ್ ಮಾತು ಕೇಳಿ ಆರ್ ಸಿಬಿಗೆ ಮುಂದಿನ ನಾಯಕ ನೀವೇ ಆಗಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments