Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂಬೈ: ಟೀಂ ಇಂಡಿಯಾ ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿದ್ದು ಅವರ ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ. ಈಗಾಗಲೇ ಬಿಸಿಸಿಐ ಅಧ್ಯಕ್ಷ ಗಂಗೂಲಿ ಮೇಲೆ ಕೊಹ್ಲಿ ಫ್ಯಾನ್ಸ್ ಕೋಪಗೊಂಡಿದ್ದರು. ಇದೀಗ ಅವರ ಮತ್ತೊಂದು ಹೇಳಿಕೆ ಆಕ್ರೋಶ ಮೇರೆ ಮೀರಿಸಿದೆ.
ಏಷ್ಯಾ ಕಪ್ ನಲ್ಲಿ ವಿರಾಟ್ ಕೊಹ್ಲಿ ಇಲ್ಲದೆಯೂ ರೋಹಿತ್ ಶರ್ಮಾ ನಾಯಕರಾಗಿ ಟೀಂ ಇಂಡಿಯಾ ಗೆದ್ದಿತ್ತು ಎಂದು ಗಂಗೂಲಿ ನೀಡಿದ ಹೇಳಿಕೆಯೊಂದು ಕೊಹ್ಲಿ ಅಭಿಮಾನಿಗಳ ಆಕ್ರೋಶ ಹೆಚ್ಚಿಸಿದೆ.
ಗಂಗೂಲಿ ಕುರಿತು ವಿವಿಧ ಮೆಮೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಗಂಗೂಲಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಯ್ ಶಾ ಮತ್ತು ಗಂಗೂಲಿ ಆಡಳಿತ ಬಿಸಿಸಿಐನಲ್ಲಿ ಕೊನೆಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.