Webdunia - Bharat's app for daily news and videos

Install App

ಮಯಾಂಕ್ ಅಗರ್ವಾಲ್ ಆರೋಗ್ಯದ ಲೇಟೆಸ್ಟ್ ಅಪ್ ಡೇಟ್

Krishnaveni K
ಬುಧವಾರ, 31 ಜನವರಿ 2024 (10:02 IST)
Photo Courtesy: Twitter
ಅಗರ್ತಲಾ: ವಿಮಾನ ಪ್ರಯಾಣ ವೇಳೆ ನೀರು ಕುಡಿದ ಬಳಿಕ ಅಸ್ವಸ್ಥರಾಗಿದ್ದ ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಮಯಾಂಕ್ ಅಗರ್ವಾಲ್ ಆರೋಗ್ಯದ ಬಗ್ಗೆ ಲೇಟೆಸ್ಟ್ ಅಪ್ ಡೇಟ್ ಸಿಕ್ಕಿದೆ.

ಮಯಾಂಕ್ ಅಗರ್ವಾಲ್ ರನ್ನು ಅಗರ್ತಲಾದ ಐಎಲ್ ಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಐಸಿಯುವಿನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಮಯಾಂಕ್ ಸುಧಾರಿಸುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ‍್ಯತೆಯಿದೆ.

ಶುಕ್ರವಾರ ರೈಲ್ವೇಸ್ ತಂಡದ ವಿರುದ್ಧ ನಡೆಯಲಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಭಾಗಿಯಾಗಲು ಸೂರತ್ ವಿಮಾನ ಪ್ರಯಾಣ ಮಾಡುವಾಗ ನೀರು ಕುಡಿದ ನಂತರ ಮಯಾಂಕ್ ಅಸ್ವಸ್ಥರಾಗಿದ್ದರು. ತೀವ್ರ ವಾಂತಿ ಮತ್ತು ಗಂಟಲಲ್ಲಿ ಉರಿ ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಯಾಂಕ್ ಆರೋಗ್ಯದ ಬಗ್ಗೆ ಅಭಿಮಾನಿಗಳೂ ಆತಂಕಿತರಾಗಿದ್ದರು. ಇದೀಗ ಮಯಾಂಕ್ ಸ್ಥಿತಿ ಸುಧಾರಿಸಿಕೊಳ್ಳುತ್ತಿದೆ ಎಂಬ ಸುದ್ದಿ ಅಭಿಮಾನಿಗಳಿಗೆ ನೆಮ್ಮದಿ ನೀಡಿದೆ. ಈಗಲೂ ವೈದ್ಯರು ಅವರನ್ನು ನಿಗಾದಲ್ಲಿರಿಸಿದ್ದಾರೆ. ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ.

 ಹೆಲ್ತ್ ಬುಲೆಟಿನಲ್ಲಿ ಏನಿದೆ?
ಆಸ್ಪತ್ರೆ ಹೆಲ್ತ್ ಬುಲೆಟಿನ್ ಪ್ರಕಾರ ‘ಕರ್ನಾಟಕ ಕ್ರಿಕೆಟಿಗ ಮಯಾಂಕ್ ಅಗರ್ವಾಲ್  ಗಂಟಲ್ಲಿ ಕಿರಿ ಕಿರಿ ಅನುಭವ ಹಾಗೂ ತುಟಿಯ ಮೇಲೆ ಗುಳ್ಳೆಗಳು ಎದ್ದಿರುವುದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿರುವ ಆರೋಗ್ಯ ಇದೀಗ ಸ್ಥಿರವಾಗಿದೆ’ ಎಂದಿದೆ.

ಮುಂದಿನ ರಣಜಿ ಪಂದ್ಯಕ್ಕೆ ಅಲಭ್ಯ
ತೀವ್ರ ಅಸ್ವಸ್ಥರಾಗಿರುವ ಮಯಾಂಕ್ ಅಗರ್ವಾಲ್ ಚೇತರಿಸಿಕೊಂಡು ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾದರೂ ಮುಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಉಳಿದ ಆಟಗಾರರು ರಾಜ್ ಕೋಟ್ ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ. ಮಯಾಂಕ್ ಜೊತೆಗೆ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಗಳು ಮತ್ತು ತ್ರಿಪುರಾ ಕ್ರಿಕೆಟ್ ಸಂಸ್ಥೆ ಅಧಿಕಾರಿಗಳು ಇದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

ಮುಂದಿನ ಸುದ್ದಿ
Show comments