Webdunia - Bharat's app for daily news and videos

Install App

ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ ಸೋತ ಬೆನ್ನಲ್ಲೇ ನಾಯಕತ್ವವನ್ನು ಬದಲಿಸಿದ ನ್ಯೂಜಿಲೆಂಡ್‌ ತಂಡ

Sampriya
ಮಂಗಳವಾರ, 11 ಮಾರ್ಚ್ 2025 (15:18 IST)
Photo Courtesy X
ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ ಭಾರತ ವಿರುದ್ಧ ಸೋತ ಬೆನ್ನಲ್ಲೇ ನ್ಯೂಜಿಲೆಂಡ್‌ ತಂಡವು ನಾಯಕ ಮಿಚೆಲ್‌ ಸ್ಯಾಂಟನರ್‌ ಅವರಿಗೆ ವಿಶ್ರಾಂತಿ ನೀಡಿ, ಮುಂದಿನ ಸರಣಿಗೆ ಮತ್ತೊಬ್ಬ ಆಟಗಾರನಿಗೆ ಸಾರಥ್ಯ ವಹಿಸಿದೆ.

ದುಬೈನಲ್ಲಿ ಭಾನುವಾರ ನಡೆದ ಫೈನಲ್‌ನಲ್ಲಿ ಭಾರತ ತಂಡವು 4 ವಿಕೆಟ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ, ಮೂರನೇ ಬಾರಿ ಚಾಂಪಿಯನ್ಸ್‌ ಟ್ರೋಫಿ ಗೆದ್ದುಕೊಂಡಿತು. ಈ ಮೂಲಕ ಎರಡನೇ ಬಾರಿಗೆ ಚಾಂಪಿಯನ್ಸ್‌ ಟ್ರೋಫಿಗೆ ಮುತ್ತಿಡುವ ಕಿವೀಸ್‌ ಕನಸು ನುಚ್ಚುನೂರಾಗಿದೆ.

ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಆಲ್‌ರೌಂಡರ್‌ ಮಿಚೆಲ್‌ ಸ್ಯಾಂಟನರ್‌ ಎಲ್ಲರ ಗಮನ ಸೆಳೆದಿದ್ದಾರೆ. ಆದರೆ ಮುಂಬರುವ ಪಾಕಿಸ್ತಾನ ವಿರುದ್ದದ ಸರಣಿಗೆ ಇವರಿಂದ ನಾಯಕತ್ವವನ್ನು  ನೀಡದೆ ವಿಶ್ರಾಂತಿ ನೀಡಲಾಗಿದೆ.

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಫೈನಲ್‌ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ನೀಡಿದ ಪ್ಲೇಯರ್‌ ಕಿವೀಸ್‌ ನಾಯಕತ್ವವನ್ನು ನೀಡಲಾಗಿದೆ. ಮಿಚೆಲ್‌ ಸ್ಯಾಂಟ್ನರ್‌ ಅವರಿಗೂ ಮುಂದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಪಾಕ್‌ ವಿರುದ್ದ ಟಿ20 ಸರಣಿಗೆ ತಂಡಕ್ಕೆ ಮೈಕಲ್‌ ಬ್ರೇಸ್‌ವೆಲ್‌ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಸ್ಯಾಂಟನರ್‌ರಿಂದ ತೆರವಾದ ಸ್ಥಾನಕ್ಕೆ ನ್ಯೂಜಿಲೆಂಡ್ ಮೈಕೆಲ್ ಬ್ರೇಸ್‌ವೆಲ್ ಅವರನ್ನು ನೇಮಿಸಲಾಗಿದೆ. ಅವರ ಫೈನಲ್‌ನಲ್ಲಿ ಭಾರತ ವಿರುದ್ಧ 40 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್‌ನೊಂದಿಗೆ ಅಜೆಯ 53 ರನ್‌ ಸಿಡಿಸಿದ್ದರು. ಬೌಲಿಂಗ್‌ನಲ್ಲೂ 2 ವಿಕೆಟ್‌ ಕಬಳಿಸಿದ್ದರು. ಅದರ ಬೆನ್ನಲ್ಲೇ ಅವರಿಗೆ ಹೊಸ ಜವಾಬ್ದಾರಿ ದೊರಕಿದೆ.

ನ್ಯೂಜಿಲೆಂಡ್ ತಂಡ ಫೈನಲ್‌ ಹಂತವನ್ನು ತಲುಪುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದ ಯುವ ಆಟಗಾರ ರಚಿನ್‌ ರವೀಂದ್ರ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇವರು ಸ್ಥಿರ ಪ್ರದರ್ಶನದ ಫಲವಾಗಿ ಇವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಸಹ ಲಭಿಸಿತ್ತು.
 <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments