Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪುಣೆ: ಮುಂಬರುವ ದಿನಗಳಲ್ಲಿ ಯುವ ತಂಡವನ್ನು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಟೀಂ ಇಂಡಿಯಾದಲ್ಲಿ ಅನುಭವಿಗಳಿಗೆ ವಿಶ್ರಾಂತಿ ನೀಡಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತಿದೆ.
ಇದರ ಭಾಗವಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಹಿರಿಯ ಆಟಗಾರರನ್ನು ಟಿ20 ತಂಡಕ್ಕೆ ಆಯ್ಕೆ ಮಾಡಲಾಗುತ್ತಿಲ್ಲ. ಇದು ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದೆ. ರೋಹಿತ್, ಕೊಹ್ಲಿ ಏಕದಿನ ಮತ್ತು ಟೆಸ್ಟ್ ಗೆ ಮಾತ್ರ ಸೀಮಿತವಾಗಲಿದ್ದಾರೆ ಎಂದು ಕೋಚ್ ದ್ರಾವಿಡ್ ಸುಳಿವು ನೀಡಿದ್ದಾರೆ.
ಶ್ರೀಲಂಕಾ ವಿರುದ್ಧ ದ್ವಿತೀಯ ಏಕದಿನ ಸೋಲಿನ ಬಳಿಕ ಮಾತನಾಡಿರುವ ದ್ರಾವಿಡ್ ನಾವು ಈ ಯುವ ತಂಡಕ್ಕೆ ಹೆಚ್ಚು ಸಮಯ ನೀಡಬೇಕಾಗುತ್ತದೆ. ಅಲ್ಲಿಯವರೆಗೂ ತಾಳ್ಮೆಯಿಂದಿರಬೇಕು. ಮುಂದಿನ ಏಕದಿನ ವಿಶ್ವಕಪ್ ದೃಷ್ಟಿಯಲ್ಲಿಟ್ಟುಕೊಂಡು ಈಗ ಟಿ20 ತಂಡಕ್ಕೆ ಯುವ ಆಟಗಾರರಿಗೆ ಅವಕಾಶ ನೀಡಲಾಗುತ್ತಿದೆ ಎಂದಿದ್ದಾರೆ ದ್ರಾವಿಡ್.