Webdunia - Bharat's app for daily news and videos

Install App

ಎಲ್ಲಿಸ್ ಪೆರ್ರಿ ಮೇಲೆ ಸ್ಮೃತಿ ಮಂಧನಾಗೆ ಹೊಟ್ಟೆ ಉರಿನಾ, ಹೀಗ್ಯಾಕೆ ಮಾಡಿದ್ರಿ ಎಂದ ಫ್ಯಾನ್ಸ್ (ವಿಡಿಯೋ)

Krishnaveni K
ಮಂಗಳವಾರ, 25 ಫೆಬ್ರವರಿ 2025 (09:52 IST)
Photo Credit: X
ಬೆಂಗಳೂರು: ಡಬ್ಲ್ಯುಪಿಎಲ್ 2025 ರ ನಿನ್ನೆಯ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಸೂಪರ್ ಓವರ್ ನಲ್ಲಿ ಬ್ಯಾಟಿಂಗ್ ಮಾಡಲು ಬಂದ ಆರ್ ಸಿಬಿ ನಾಯಕಿ ಸ್ಮೃತಿ ಮಂಧನಾ ಮೇಲೆ ಫ್ಯಾನ್ಸ್ ಆಕ್ರೋಶಗೊಂಡಿದ್ದಾರೆ. ನಿಮಗೆ ಎಲ್ಲಿಸ್ ಪೆರ್ರಿ ಕಂಡ್ರೆ ಹೊಟ್ಟೆ ಉರಿನಾ ಎಂದಿದ್ದಾರೆ.

ನಿನ್ನೆಯ ಪಂದ್ಯದಲ್ಲಿ180 ರನ್ ಗಳ ಗುರಿ ಬೆನ್ನತ್ತಿದ ಯುಪಿ ವಾರಿಯರ್ಸ್ ಕೂಡಾ 180 ರನ್ ಗಳಿಸಿ ಪಂದ್ಯ ಟೈ ಮಾಡಿಕೊಂಡಿತು. ಬಳಿಕ ಸೂಪರ್ ಓವರ್ ನಲ್ಲಿ ಯುಪಿ ಗಳಿಸಿದ್ದು ಕೇವಲ 8 ರನ್. ಇದನ್ನು ಗಳಿಸಲೂ ಆಗದೇ ಆರ್ ಸಿಬಿ ಒದ್ದಾಡಿತು.

ಇದಕ್ಕೆ ಕಾರಣ ಸ್ಮೃತಿ ಮಂಧನಾ ಸ್ವಾರ್ಥ ಎನ್ನುವುದು ಅಭಿಮಾನಿಗಳ ಆಕ್ರೋಶವಾಗಿದೆ. ತಾವು ಅಂತಹ ಫಾರ್ಮ್ ನಲ್ಲಿಲ್ಲದೇ ಇದ್ದರೂ ಎಲ್ಲಿಸ್ ಪೆರ್ರಿಯನ್ನು ಬ್ಯಾಟಿಂಗ್ ಗೆ ಕಳುಹಿಸದೇ ತಾವೇ ಬ್ಯಾಟಿಂಗ್ ಗೆ ಬಂದು ದೊಡ್ಡ ತಪ್ಪು ಮಾಡಿದರು ಎಂದು ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲಿಸ್ ಪೆರ್ರಿಯನ್ನು ಕಂಡರೆ ನಿಮಗೆ ಹೊಟ್ಟೆ ಉರಿನಾ? ಎಲ್ಲಿಸ್ ಪಂದ್ಯ ಗೆಲ್ಲಿಸಿಕೊಟ್ಟರೆ ಎಲ್ಲಿ ನಿಮ್ಮ ಬೆಲೆ ಕಡಿಮೆಯಾಗುತ್ತದೋ ಎಂಬ ಇನ್ ಸೆಕ್ಯುರಿಟಿ ಎಂದು ಫ್ಯಾನ್ಸ್ ಜರೆದಿದ್ದಾರೆ. ಜಸ್ಟ್ 8 ರನ್ ಗಳಿಸಲೂ ಆಗಲಿಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಸೋಲಿನ ಬಳಿಕ ಕಟ್ಟಾ ಅಭಿಮಾನಿಯೊಬ್ಬರು ಕೈ ತೋರಿಸಿ ಸ್ಮೃತಿ ಮೇಲೆ ಆಕ್ರೋಶ ಹೊರಹಾಕುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments