Webdunia - Bharat's app for daily news and videos

Install App

RCB vs DC: ಕನ್ನಡಿಗ ಕೆಎಲ್‌ ರಾಹುಲ್ ಬೊಂಬಾಟ್ ಆಟ: ತವರಿನಲ್ಲಿ ಎರಡನೇ ಸೋಲುಂಡ ಆರ್‌ಸಿಬಿ

Sampriya
ಗುರುವಾರ, 10 ಏಪ್ರಿಲ್ 2025 (23:27 IST)
Photo Courtesy X
ಬೆಂಗಳೂರು: ಕನ್ನಡಿಗ ಕೆಎಲ್ ರಾಹುಲ್ ಅವರ ಅಬ್ಬರದ ಬ್ಯಾಟಿಂಗ್‌ನಿಂದ ಡೆಲ್ಲಿ ಕ್ಯಾಪಿಟಲ್ಸ್‌ ಆರ್‌ಸಿಬಿ ವಿರುದ್ಧ 6 ವಿಕೆಟ್ಸ್‌ನಿಂದ ಗೆದ್ದಿದೆ. ಈ ಮೂಲಕ ತವರಿನ ಆರ್‌ಸಿಬಿ ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದೆ. ಆದರೆ ಕನ್ನಡಿಗನ ಆಟ ನೋಡಿ ಅಭಿಮಾನಿಗಳು ಖುಷ್ ಆಗಿದ್ದಾರೆ.

ಇನ್ನೂ ಆರ್‌ಸಿಬಿ ವಿರುದ್ಧ ಗೆಲವು ಸಾಧಿಸುತ್ತಿದ್ದ ಹಾಗೇ ರಾಹುಲ್ ಕ್ರೀಡಾಂಗಣವನ್ನು ತೋರಿಸಿ, ನನ್ನದು ಎಂದು ಹೇಳಿ, ತಮ್ಮ ಆಕ್ರೋಶವನ್ನು ಹೊರಹಾಕಿದರು. ಕಳೆದ ಕೆಲ ವರ್ಷಗಳಿಂದ ಕೆಎಲ್‌ ರಾಹುಲ್ ಅವರು ತವರಿನ ತಂಡದಲ್ಲಿ ಆಡಬೇಕೆಂಬುದು ಅಭಿಮಾನಿಗಳ ಆಸೆ. ಆದರೆ ಕೆಎಲ್‌ ರಾಹುಲ್ ಅವರನ್ನು ಆರ್‌ಸಿಬಿ ಪರಾಂಚೈಸಿ ಖರೀದಿಸುವಲ್ಲಿ ನಿರಾಸೆ ತೋರಿಸುತ್ತಲೇ ಇದೆ. ಅಭಿಮಾನಿಗಳು ಮಾತ್ರ ನಮ್ಮ ಮಣ್ಣಿನ ಮಗ ಆರ್‌ಸಿಬಿಗೆ ಬರಬೇಕೆಂದು ಹೇಳುತ್ತಲೇ ಇರುತ್ತಾರೆ.

ಇದೀಗ ಆರ್‌ಸಿಬಿ ವಿರುದ್ಧ ನಡೆದ ಪಂದ್ಯಾಟದಲ್ಲಿ ಕೆಎಲ್ ರಾಹುಲ್‌ ಇದಕ್ಕೆ ತಕ್ಕೆ ಉತ್ತರ ನೀಡಿದ್ದಾರೆ ಎನ್ನಲಾಗಿದೆ. ಆರ್‌ಸಿಬಿ ವಿರುದ್ಧ ಇಂದಿನ ಐಪಿಎಲ್ ಪಂದ್ಯಾಟದಲ್ಲಿ ಡೆಲ್ಲಿ ಗೆಲುವು ಸಾಧಿಸುವ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನೂ ಆರ್‌ಸಿಬಿ ಮೂರನೇ ಸ್ಥಾನದಲ್ಲಿದೆ.  

ಡಿಸಿ ನಾಯಕ ಅಕ್ಷರ್ ಪಟೇಲ್ ಆರ್‌ಸಿಬಿ ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ತವರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಆರಂಭ ಮಾಡಿದ ಆರ್‌ಸಿಬಿ ಸಾಲ್ಟ್‌, ಪಡಿಕ್ಕಲ್, ಕೊಹ್ಲಿ ಔಟ್‌ ಆಗುತ್ತಿದ್ದ ಹಾಗೇ  ಮತ್ತೆ ಉತ್ತಮ ಪ್ರದರ್ಶನ ನೀಡಲು ವಿಫಲವಾಯಿತು. 20 ಓವರ್‌ಗಳಲ್ಲಿ 7ವಿಕೆಟ್ ಕಳೆದುಕೊಂಡು 163 ರನ್ ಗಳಿಸಿ, ಡೆಲ್ಲಿಗೆ 164ರನ್‌ಗಳ ಗೆಲುವಿನ ಟಾರ್ಗೆಟ್ ನೀಡಿತು.

 ರಜತ್ ಪಾಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾ ವಿರುದ್ಧ ತಮ್ಮ ವಿದೇಶ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಗುಜರಾತ್ ಟೈಟಾನ್ಸ್  ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ತವರಿನಲ್ಲಿ ನಡೆದ ಎರಡು ಪಂದ್ಯಾಟದಲ್ಲೂ ಆರ್‌ಸಿಬಿ ಸೋಲು ಅನುಭವಿಸಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments